ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
The chariot festival of Madalagatti Anjaneya Swamy
ಹೂವಿನ ಹಡಗಲಿ 08: ತಾಲ್ಲೂಕಿನ ಮದಲಗಟ್ಟಿ ಗ್ರಾಮದಲ್ಲಿ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವವು ಭಾನುವಾರ ಸಂಜೆ ಅಪಾರ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.ರಥೋತ್ಸವಕ್ಕೂ ಮುನ್ನ ಬೆಳಿಗ್ಗೆಯಿಂದಲೇ ಅನೇಕ ಭಾಗಗಳಿಂದ ಭಕ್ತಾದಿಗಳು ತಮ್ಮ ಇಷ್ಟಾರ್ಥ ದೇವರಾದ ಆಂಜನೇಯ ಸ್ವಾಮಿಯ ಹಣ್ಣು-ಕಾಯಿ, ಹೂವುಗಳ ಅರ್ಚನೆ ಮಾಡಿಸಿದರು. ಮಂಗಳಾರತಿ, ಅಭಿಷೇಕಗಳು ನಡೆಯುತ್ತಿದ್ದವು.ಸಂಜೆ ಜರುಗಿದ ರಥೋತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ತಮ್ಮ ಭಕ್ತಿ-ಭಾವ ಅರ್ಿಸಿದರು. ರಥೋತ್ಸವವು ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಬಾಳೆಹಣ್ಣು, ಉತ್ತತ್ತಿಗಳನ್ನು ರಥಕ್ಕೆಸೆದು ಕೈ ಮುಗಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 