ಮದಲಗಟ್ಟಿ ಆಂಜನೇಯ ಸ್ವಾಮಿಯ ರಥೋತ್ಸವ
The chariot festival of Madalagatti Anjaneya Swamy
ಹೂವಿನ ಹಡಗಲಿ 08: ತಾಲ್ಲೂಕಿನ ಮದಲಗಟ್ಟಿ ಗ್ರಾಮದಲ್ಲಿ ಆಂಜನೇಯ ಸ್ವಾಮಿಯ ಜಾತ್ರಾ ಮಹೋತ್ಸವವು ಭಾನುವಾರ ಸಂಜೆ ಅಪಾರ ಭಕ್ತ ಸಮೂಹದ ನಡುವೆ ವಿಜೃಂಭಣೆಯಿಂದ ಜರುಗಿತು.ರಥೋತ್ಸವಕ್ಕೂ ಮುನ್ನ ಬೆಳಿಗ್ಗೆಯಿಂದಲೇ ಅನೇಕ ಭಾಗಗಳಿಂದ ಭಕ್ತಾದಿಗಳು ತಮ್ಮ ಇಷ್ಟಾರ್ಥ ದೇವರಾದ ಆಂಜನೇಯ ಸ್ವಾಮಿಯ ಹಣ್ಣು-ಕಾಯಿ, ಹೂವುಗಳ ಅರ್ಚನೆ ಮಾಡಿಸಿದರು. ಮಂಗಳಾರತಿ, ಅಭಿಷೇಕಗಳು ನಡೆಯುತ್ತಿದ್ದವು.ಸಂಜೆ ಜರುಗಿದ ರಥೋತ್ಸವದಲ್ಲಿ ಸಾವಿರಾರು ಜನರು ಭಾಗವಹಿಸಿ ತಮ್ಮ ಭಕ್ತಿ-ಭಾವ ಅರ್ಿಸಿದರು. ರಥೋತ್ಸವವು ಸಾಗುತ್ತಿದ್ದಂತೆ ನೆರೆದಿದ್ದ ಭಕ್ತರು ಬಾಳೆಹಣ್ಣು, ಉತ್ತತ್ತಿಗಳನ್ನು ರಥಕ್ಕೆಸೆದು ಕೈ ಮುಗಿದರು.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 