ಸಂವಿಧಾನ ಪ್ರತಿ ಸುಟ್ಟವರ ಮೇಲೆ ಕ್ರಮಕ್ಕೆ ಆಗ್ರಹ
ಲೋಕದರ್ಶನ ವರದಿ
ಹಾವೇರಿ18 : ದೆಹಲಿಯ ಜಂತರಮಂತರನಲ್ಲಿ ಭಾರತ ಸಂವಿಧಾನದ ಪ್ರತಿಗಳನ್ನು ಸುಟ್ಟಿರುವ ಕಿಡಿಗೇಡಿಗಳಿಗೆ ರಾಷ್ಟದ್ರೋಹಿಗಳೆಂದು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಹಾಗೂ ಪ್ರತಿ ಬಜೆಟಿನಲ್ಲಿ ಪರಿಶಿಷ್ಟ ಜಾತಿ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶೇ25 ಮಿಸಲಿಡಬೇಕು ಎಂದು ಒತ್ತಾಯಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ(ಡಿಎಸ್4)ವತಿಯಿಂದ ಪ್ರಧಾನ ಮಂತ್ರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ|| ಎಂವ್ಹಿ ವೆಂಕಟೇಶ್ ಅವರ ಮೂಲಕ ಮನವಿ ಸಲ್ಲಿಸಲಾಯಿತು. ಬಜೆಟಿನಲ್ಲಿ ಹಣ ಮಿಸಲಿಡುವ ಪರಿಶಿಷ್ಟ ಜಾತಿ ಪಂಗಡಗಳ ಉಪಯೋಜನೆ ಕಾಯ್ದೆಯನ್ನು ಜಾರಿಗೆ ತರಬೇಕು.ಕೇಂದ್ರ ಸಕರ್ಾರ ಭಂಡವಾಳಶಾಹಿತ್ವದ ಧೋರಣೆ ಬಿಟ್ಟು, ವಿದ್ಯೆ, ಆರೋಗ್ಯ ಸೇವೆ ಮತ್ತು ಭೂಮಿ ವ್ಯಾಪಾರಿಕರಣವಾಗುತ್ತಿರುವ ಕಾರಣ ಈ ಸೇವೆಗಳನ್ನು ರಾಷ್ಟೀಕರಣ ಮಾಡಿ ಉಚಿತವಾಗಿ ದೇಶದ ಪ್ರತಿಯೊಬ್ಬರಿಗೂ ಜಾತಿ, ಮತ ಎನ್ನದೆ ಅನುಭವಿಸಲು ಅವಕಾಶ ಕಲ್ಪಸಬೇಕು.ಸಮಾನ ಶಿಕ್ಷಣ ನೀತಿ ರೂಪಿಸಲು ಶಿಕ್ಷಣ ತಜ್ಞರನ್ನೊಳಗೊಂಡ ಆಯೋಗ ರಚಿಸಬೇಕು. ಯುವಕರಿಗೆ ಉದ್ಯೋಗ ನೀಡುವ ಹಾಗೂ ಅವರಿಗೆ ಜೀವನ ಭದ್ರತೆ ಒದಗಿಸುವ ಯೋಜನೆ ಜಾರಿಗೆ ತರಬೇಕು ಸೇರಿದಂತೆ ಪ್ರಸಕ್ತವಾಗಿರುವ ಸಮಸ್ಯೆಗಳ ಪರಿಹಾರಕ್ಕಾಗಿ ಹಾಗೂ ಹಲವಾರು ಬೇಡಿಕೆಗಳನ್ನು ಇಡೇರಿಸುವಂತೆ ಡಿಎಸ್4 ಸಂಘಟನೆ ಮನವಿಯಲ್ಲಿ ತಿಳಿಸಿದೆ. ಡಿಎಸ್4 ರಾಜ್ಯ ಪ್ರಧಾನ ಕಾರ್ಯದಶರ್ಿ ಎನ್ ಎನ್ ಗಾಳೆಮ್ಮನವರ.ಮುಖಂಡರಾದ ಸತೀಶ ಕಾಟೇನಹಳ್ಳಿ.ಸುರೇಶ ಛಲವಾದಿ.ಫಕ್ಕಿರೇಶ ಕಾಳಿ.ಮಲ್ಲೇಶಪ್ಪ ಕಡಕೋಳ.ಕೃಷ್ಣ ಲಮಾಣಿ. ನಾಗೇಶ ಲಮಾಣಿ ಪದಾಧಿಕಾರಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 