ಕರೋನ ಮಹಾಮಾರಿಗೆ ದೇಶದಲ್ಲಿ ಈವರೆಗೆ 118 ಜನರ ಬಲಿ
ನವದೆಹಲಿ, ಏ 6, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 27 ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದು ಈವರೆಗೆ ಸಾವಿನ ಗಡಿ 118 ಕ್ಕೆ ಏರಿಕೆಯಾಗಿದೆ. ಇಡೀ ವಿಶ್ವವನ್ನು ಅಕ್ಷರಶಃ ಬೆಚ್ಚಿ ಬೀಳಿಸಿರುವ ಮಾರಕ ಮಹಾಮಾರಿಯಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ ನೂರರ ಗಡಿ ದಾಟಿದೆ. ರಾಜ್ಯಗಳಿಂದ ಬಂದ ಹೊಸ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಕೊರೋನ ವೈರಸ್ ಸೋಂಕಿನಿಂದ ಜೀವ ಕಳೆದುಕೊಂಡವರ ಸಂಖ್ಯೆ ಈಗ 118 ಕ್ಕೆ ಏರಿಕೆಯಾಗಿದೆ.ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 13 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ಭಾನುವಾರ ದೇಶದ ವಿವಿಧೆಡೆಗಳಲ್ಲಿ 541 ಹೊಸ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4 , 298 ಕ್ಕೆ ಏರಿಕೆಯಾಗಿದೆ . ಆರೋಗ್ಯ ಇಲಾಖೆ ಅಂಕಿಅಂಶಗಳ ಪ್ರಕಾರ ನಿನ್ನೆಯವರೆಗೆ ಪಾಸಿಟಿವ್ ಪ್ರಕರಣಗಳು 3,374 ಹಾಗೂ ಸೋಂಕಿನಿಂದ ಮೃತಪಟ್ಟಿದ್ದರು ಎಂದು ಮೊದಲು ಹೇಳಲಾಗಿದ್ದರೂ ನಂತರದ 24 ಗಂಟೆಗಳಲ್ಲಿ 472 ಹೊಸ ಪ್ರಕರಣಗಳು ದೃಢಪಟ್ಟು ಹಲವು ಸಾವುಗಳು ವರದಿಯಾಗಿತ್ತು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 