ಕಿತ್ತೂರು ರಾಣಿ ಚೆನ್ನಮ್ಮರ ಧೈರ್ಯ, ಸಾಹಸ ಇಂದಿನ ಮಹಿಳೆಯರಿಗೆ ಆದರ್ಶಪ್ರಾಯ.
The courage and adventure of Queen Chennamma of Kittur are a role model for women today.
ಕಿತ್ತೂರು ರಾಣಿ ಚೆನ್ನಮ್ಮರ ಧೈರ್ಯ, ಸಾಹಸ ಇಂದಿನ ಮಹಿಳೆಯರಿಗೆ ಆದರ್ಶಪ್ರಾಯ.
ವಿಜಯನಗರ(ಹೊಸಪೇಟೆ) 23 : ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ದೇಶದ ವೀರಸೇನಾನಿಗಳನ್ನು ಬಡಿದೆಬ್ಬಿಸಿದ ಕೀರ್ತಿ ಮೊದಲ ಮಹಿಳಾ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮನ ಧೈರ್ಯ ಮತ್ತು ಸಾಹಸ ಇಂದಿನ ಮಹಿಳೆಯರಿಗೆ ಆದರ್ಶಪ್ರಾಯ ಎಂದು ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗುರುವಾರ ಅವರು ಮಾತನಾಡಿದರು,
ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಇಂದಿಗೂ ಮಹಿಳಾ ಸಮುದಾಯಕ್ಕೆ ದೊಡ್ಡ ಪ್ರೇರಣಾ ಶಕ್ತಿ ಆಗಿದ್ದಾರೆ. ಅವರ ಧೃಡ ನಿರ್ಧಾರ ಮತ್ತು ಹೋರಾಟದ ಮನೋಭಾವ ಪ್ರತಿಯೊಬ್ಬ ಮಹಿಳೆಗೂ ಅನ್ಯಾಯದ ವಿರುದ್ಧ ಧ್ವನಿ ಎತ್ತಲು ಸ್ಫೂರ್ತಿ ನೀಡುತ್ತದೆ. ಇಂದಿನ ಮಹಿಳೆಯರಿಗೂ ಸ್ವಯಂರಕ್ಷಣೆಗೆ ಕೆಲವು ಕೌಶಲ್ಯಗಳ ಕಲಿಕೆ ಅಗತ್ಯವಿದೆ. ಕಲಿಯಲು ಹೆಣ್ಣುಮಕ್ಕಳು ಮುಂದಾಗಬೇಕು ಎಂದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ.ತಿಮ್ಮಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣನವರ್, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಗೊಗ್ಗ ಚನ್ನಬಸವರಾಜ್, ಪ್ರಧಾನ ಕಾರ್ಯದರ್ಶಿ ನೀಲಕಂಠ ಗೌಡ, ಪ್ರಮುಖರಾದ ಕಿಚಡಿ ಕೊಟ್ರೇಶ್, ಮಧುರಚನ್ನಶಾಸಿೊ,್ತ ರವಿಶಂಕರ್, ಶರಣು ಸ್ವಾಮಿ, ಎಲ್.ಬಸವರಾಜ್, ಸೋಮಶೇಖರ್, ಶಿವಶಂಕರ್, ಅಶ್ವಿನ್ ಕೊತ್ತಂಬರಿ, ಶಿವಪುತ್ರ್ಪ, ಕಾಶಿನಾಥಯ್ಯ, ಚಿತ್ತಪ್ಪ, ಮಲ್ಲಿಕಾರ್ಜುನ್ ಮೆಟ್ರಿ, ವಿಶ್ವನಾಥ್, ಗೌಳಿ ರುದ್ರ್ಪ, ಮಲ್ಲೇಶಪ್ಪ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 