ಈ ದಿನ 28 ವರ್ಷಗಳ ಬಳಿಕ ಭಾರತ ವಿಶ್ವಕಪ್ ಗೆದ್ದ ಸುದಿನ
ಮುಂಬಯಿ, ಏ 2, ಧೋನಿ
ಅವರ ಫಿನಿಶಿಂಗ್ ಸ್ಟೈಲ್ ಮತ್ತು ಕಿಕ್ಕಿರಿದು ತುಂಬಿದ ಜನ ಸಾಗರದ ಮುಂದೆ ಟೀಮ್ ಇಂಡಿಯಾ
28 ವರ್ಷಗಳ ನಂತರ ಐಸಿಸಿ ಏಕದಿನ ವಿಶ್ವ ಕಪ್ ಅನ್ನು ಮುಡಿಗೇರಿಸಿಕೊಂಡಿತು. ಮುಂಬೈನ
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾದ ವೇಗಿ ನುವಾನ್
ಕುಲಸೇಕರ ಬೌಲಿಂಗ್ ನಲ್ಲಿ ಸಿಕ್ಸರ್ ಬಾರಿಸುವುದರೊಂದಿಗೆ ಮಹೇಂದ್ರ ಸಿಂಗ್ ಧೋನಿ
ಸಾರಥ್ಯದ ಭಾರತ ತಂಡ, 2011ರ ವಿಶ್ವ ಕಪ್ ಗೆದ್ದುಕೊಂಡಿತು ಎಂದು ಅಂದು ವೀಕ್ಷಕ
ವಿವರಣೆಗಾರರಾಗಿದ್ದ ರವಿಶಾಸ್ತ್ರಿ ಹೇಳುತ್ತಿದ್ದಂತೆಯೇ ಲಕ್ಷಾಂತರ ಕ್ರೀಡಾಭಿಮಾನಿಗಳ
ಕಿವಿ ನೆಟ್ಟಿಗಾಗಿತ್ತು.ಹೌದು.. ಭಾರತ ತಂಡ ಎರಡನೇ ವಿಶ್ವಕಪ್ ಗೆದ್ದ ಸುದಿನ
ಇಂದು. 1983ರಲ್ಲಿ ಕಪಿಲ್ ದೇವ್ ನೇತೃತ್ವದ ಭಾರತ ತಂಡ, ಮೊದಲ ಬಾರಿ ಏಕದಿನ ವಿಶ್ವಕಪ್
ಮುಡಿಗೇರಿಸಿತೊಂಡಿತ್ತು. ಆನಂತರ ಭಾರತ ಪ್ರಶಸ್ತಿ ಗೆಲ್ಲಲು ನಡೆಸಿದ ಯತ್ನಗಳೆಲ್ಲವೂ
ವಿಫಲಗೊಂಡಿದ್ದವು. ಆದರೆ ಧೋನಿ ಸಾರಥ್ಯದ ಟೀಮ್ ಇಂಡಿಯಾ 28 ವರ್ಷಗಳ ನಂತರ ವಿಶ್ವಕಪ್
ಗೆದ್ದು ಸಚಿನ್ ತೆಂಡೂಲ್ಕರ್ ಗೆ ಅರ್ಪಿಸಿತು.
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ 