ಡಿಕೆಚೌಟ ನಿಧನಕ್ಕೆ ಸಾಣೇಹಳ್ಳಿ ಶ್ರೀಗಳ ಸಂತಾಪ
ಲೋಕದರ್ಶನವರದಿ
ಸಾಣೇಹಳ್ಳಿ 19; ಇಂದು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ನಿಧನರಾದ ಹಿರಿಯ ಚೇತನ, ರಂಗ ಪೋಷಕ, ರಂಗಕಮರ್ಿ, ರಂಗ ಸಂಘಟಕ, ನಾಟಕಕಾರ ಡಿ ಕೆ ಚೌಟ ನಿಧನಕ್ಕೆ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳವರು ಸಂತಾಪ ಸೂಚಿಸುತ್ತ ಚೌಟ ಮತ್ತು ನಮ್ಮ ನಡುವಿನ ಒಡನಾಟ 25 ವರ್ಷಗಳಷ್ಟು ಹಿಂದಿನದು. ಅವರನ್ನು ನಮಗೆ ಪರಿಚಯಿಸಿದವರು ಸಿಜಿಕೆಯವರು.
ಚೌಟ ಅವರ ನಿಧನದ ವಾರ್ತೆ ತಿಳಿದು ತುಂಬ ವೇದನೆಯಾಯ್ತು. ಕನ್ನಡ ಮತ್ತು ತುಳು ಭಾಷೆಯ ಸಾಂಸ್ಕೃತಿಕ ಲೋಕದ ಕೊಂಡಿಯೊಂದು ಕಳಚಿದಂತಾಯ್ತು.
ಅನೇಕ ರಂಗಚಟುವಟಿಕೆಗಳ ಹಿಂದಿನ ಶಕ್ತಿಯಾಗಿ ಕೆಲಸ ಮಾಡುತ್ತಿದ್ದರು. ನಮ್ಮ ಮತ್ತು ನಮ್ಮ ಕಲಾ ಸಂಘದ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು.
ಒಂದು ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಅವರ ಮನೆಗೆ ಹೋಗಿ ಆರೋಗ್ಯ ವಿಚಾರಿಸಿಕೊಂಡು ಬಂದಿದ್ದೆವು. ಅವರ ಅಗಲುವಿಕೆಯಿಂದ ಆಗಿರುವ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಅವರ ಕುಟುಂಬದವರಿಗೆ ಕರುಣಿಸಲಿ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 