ಮಹಿಳಾ ತಹಶೀಲ್ದಾರ್ ವಿಜಯಾರೆಡ್ಡಿ ಜೀವಂತ ದಹಿಸಿ ಕೊಂದಿದ್ದ ಆರೋಪಿ ಸಾವು
ಹೈದರಾಬಾದ್, ನ 7: ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾಪುರಮೇಟ್ ಮಹಿಳಾ ತಹಶೀಲ್ದಾರ್ ವಿಜಯಾರೆಡ್ಡಿ ಅವರ ಕಚೇರಿಗೆ ಹಾಡುಹಗಲೇ ನುಗ್ಗಿ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ಹತ್ಯೆಮಾಡಿದ್ದ, ಕುಕೃತ್ಯ ವೇಳೆ ತಾನು ಗಾಯಗೊಂಡಿದ್ದ ಆರೋಪಿ ಕುರ್ರಾ ಸುರೇಶ್ ಉಸ್ಮಾನಿಯಾ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ಘಟನೆಯ ವೇಳೆ ಶೇ. 65ರಷ್ಟು ಗಾಯಗೊಂಡಿದ್ದ ಆತನನ್ನು ಉಸ್ಮಾನಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಆತ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ತಹಶೀಲ್ದಾರ್ ಅವರನ್ನು ರಕ್ಷಿಸಲು ಮುಂದಾಗಿ ಶೇ 80ರಷ್ಟು ಗಾಯಗೊಂಡಿದ್ದ ವಾಹನ ಚಾಲಕ ಗುರುನಾಥಂ ಅವರೂ ಸಹ ಚಿಕಿತ್ಸೆಯ ವೇಳೆ ಮೃತಪಟ್ಟಿದ್ದರು. ಘಟನೆಯ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಅಡೆಂಡರ್ ಚಂದ್ರಯ್ಯ ಎಂಬುವರು ಉಸ್ಮಾನಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 