ಮಹಿಳಾ ತಹಶೀಲ್ದಾರ್ ವಿಜಯಾರೆಡ್ಡಿ ಜೀವಂತ ದಹಿಸಿ ಕೊಂದಿದ್ದ ಆರೋಪಿ ಸಾವು
ಹೈದರಾಬಾದ್, ನ 7: ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾಪುರಮೇಟ್ ಮಹಿಳಾ ತಹಶೀಲ್ದಾರ್ ವಿಜಯಾರೆಡ್ಡಿ ಅವರ ಕಚೇರಿಗೆ ಹಾಡುಹಗಲೇ ನುಗ್ಗಿ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಜೀವಂತವಾಗಿ ಹತ್ಯೆಮಾಡಿದ್ದ, ಕುಕೃತ್ಯ ವೇಳೆ ತಾನು ಗಾಯಗೊಂಡಿದ್ದ ಆರೋಪಿ ಕುರ್ರಾ ಸುರೇಶ್ ಉಸ್ಮಾನಿಯಾ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾನೆ. ಘಟನೆಯ ವೇಳೆ ಶೇ. 65ರಷ್ಟು ಗಾಯಗೊಂಡಿದ್ದ ಆತನನ್ನು ಉಸ್ಮಾನಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಆತ ಮೃತಪಟ್ಟಿದ್ದಾನೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ತಹಶೀಲ್ದಾರ್ ಅವರನ್ನು ರಕ್ಷಿಸಲು ಮುಂದಾಗಿ ಶೇ 80ರಷ್ಟು ಗಾಯಗೊಂಡಿದ್ದ ವಾಹನ ಚಾಲಕ ಗುರುನಾಥಂ ಅವರೂ ಸಹ ಚಿಕಿತ್ಸೆಯ ವೇಳೆ ಮೃತಪಟ್ಟಿದ್ದರು. ಘಟನೆಯ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಅಡೆಂಡರ್ ಚಂದ್ರಯ್ಯ ಎಂಬುವರು ಉಸ್ಮಾನಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 