ನೆನೆಗುದಿಗೆ ಬಿದ್ದಿದ್ದ ರಸ್ತೆ ಕಾಮಗಾರಿ ಶಾಸಕರ ಪ್ರಯತ್ನದಿಂದ ಶೀಘ್ರ ಪ್ರಾರಂಭ
The delayed road works started soon with the efforts of MLAs
ಸಿಂದಗಿ 25: ನಗರದಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸಿಂದಗಿ ಯಿಂದ ಕೊಡಂಗಲ್ ರಸ್ತೆ ಕುರಿತು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಅಗಸ್ಟ್ 24ರಂದು ಸಿಂದಗಿಗೆ ಆಗಮಿಸಿದ ಸಂದರ್ಭದಲ್ಲಿ 25 ಕೋಟಿ ರೂಪಾಯಿ ಅನುದಾನ ನೀಡಬೇಕು ಎಂದು ಸಚಿವರಲ್ಲಿ ಮನವಿ ಮಾಡಲಾಗಿದೆ ಇದನ್ನು ತಿಳಿದುಕೊಂಡ ಬಿಜೆಪಿಗರು ಈ ರಸ್ತೆಯ ಬಗ್ಗೆ ಪ್ರತಿಭಟನೆ ಮಾಡಿ ನಮ್ಮಿಂದಲೇ ಆಗಿದೆ ಎನ್ನುವದನ್ನು ಬಿಂಬಿಸಿಕೊಳ್ಳುವ ಚಾಳಿಗೆ ಬಂದು ನಿಂತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಪೂಜಾರಿ ತಿರುಗೇಟು ನೀಡಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿ ಕಾಯಾಲಯದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸುಮಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ನಮ್ಮ ಶಾಸಕರ ಪ್ರಯತ್ನದಿಂದ ಆದಷ್ಟು ಬೇಗ ರಸ್ತೆ ಕಾಮಗಾರಿ ಪ್ರಾರಂಭವಾಗಲಿದೆ. ಬಿಜೆಪಿ ಮಂಡಲದ ವತಿಯಿಂದ ರಸ್ತೆತಡೆ ಮಾಡಲು ಮುಂದಾದ ಬಿಜೆಪಿ ಮಂಡಲ ಅಧ್ಯಕ್ಷರೆ ನೀವು ಸುಮಾರು ವರ್ಷಗಳಿಂದ ತಾವು ಇದೆ ರಸ್ತೆಗೆ ಹಾದು ಹೋಗುತ್ತಿದ್ದಿರಿ ಆಗ ಈ ಗುಂಡಿಗಳು ಕಾಣಲಿಲ್ಲವೇ ನೀವು ಈ ರಸ್ತೆ ಕಾರ್ಯ ಯಾಕೆ ಮಾಡಲಿಲ್ಲ ಬಿಜೆಪಿ ಸರ್ಕಾರ ಸುಮಾರು 12 ವರ್ಷಗಳ ಕಾಲ ಅಧಿಕಾರ ಅವಧಿಯಲ್ಲಿ ಯಾಕೆ ಮಾಡಲಿಲ್ಲ, ಈ ರಸ್ತೆಗೆ ಸಂಬಂಧ ಪಟ್ಟ ಹಾಗೆ ಶಾಸಕರು ಉತ್ತಮ ರೀತಿಯಲ್ಲಿ ಕಾರ್ಯ ಮಾಡುತ್ತಾ ಬಂದಿದ್ದಾರೆ, ಮುಂದೇಯು ಮಾಡುತ್ತಾರೆ ಎನ್ನುವ ಭರವಸೆ ನಮಗಿದೆ ಎಂದರು.
ಈ ಪತ್ರಿಕಾಗೋಷ್ಠಿಯಲ್ಲಿ ಪುರಸಭೆ ಸದಸ್ಯ ಸಾಯಬಣ್ಣ ಪುರದಾಳ, ಮುಖಂಡ ಪ್ರವೀಣ್ ಕಂಟಕೊಂಡ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 