ತೀವ್ರ ಸುಟ್ಟಗಾಯಗಳಿಂದ, ತಹಶೀಲ್ದಾರ್ ವಿಜಯಾ ರೆಡ್ಡಿ ಚಾಲಕನೂ ಸಾವು
ಹೈದರಾಬಾದ್, ನ 5: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾಪುರಮೆಟ್ ಮಹಿಳಾ ತಹಶಿಲ್ದಾರ್ ವಿಜಯಾರೆಡ್ಡಿ ಮೇಲೆ ದುಷ್ಕರ್ಮಿಯೊಬ್ಬ ಸೋಮವಾರ ಹಾಡುಹಗಲೇ ಅವರ ಕಚೇರಿಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬರ್ಬರವಾಗಿ ಕೊಂದ ಘಟನೆಯ ವೇಳೆ, ತಹಶೀಲ್ದಾರ್ ರನ್ನು ರಕ್ಷಿಸಲು ಮುಂದಾಗಿ ತೀವ್ರ ಸುಟ್ಟಗಾಯಗಳಿಗೆ ಒಳಗಾಗಿದ್ದ ಅವರ ವಾಹನ ಚಾಲಕ ಗುರುನಾಥಂ ಮಂಗಳವಾರ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 36ವರ್ಷದ ಮಹಿಳಾ ತಹಶೀಲ್ದಾರ್ ಮೇಲೆ ಪೆಟ್ರೋಲ್ ಸುರಿದು ದುಷ್ಕರ್ಮಿ ಬೆಂಕಿ ಹಚ್ಚಿದ್ದ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಚಾಲಕ ಗುರುನಾಥಂ ರಕ್ಷಿಸಲು ಮುಂದಾಗಿ ಶೇ 80ರಷ್ಟು ಗಾಯಗೊಂಡಿದ್ದರು. ನಂತರ ಅವರನ್ನು ಕಂಚನ್ ಬಾಗ್ ನಲ್ಲಿರುವ ಅಪೋಲೋ ಡಿ ಆರ್ ಡಿಓ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ರೈತ ಹಾಗೂ ಭೂಮಿ ಖರೀದಿಸಿ, ಮಾರಾಟ ಮಾಡುತ್ತಿದ್ದ ಕುರರ್ಾ ಸುರೇಶ್ ಎಂಬ ವ್ಯಕ್ತಿ ತಹಶೀಲ್ದಾರ್ ವಿಜಯಾ ರೆಡ್ಡಿ ಅವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದಿದ್ದ. ಈ ಘಟನೆಯಲ್ಲಿ ಆರೋಪಿ ಸುರೇಶ್ ಸಹ ತೀವ್ರವಾಗಿ ಗಾಯಗೊಂಡಿದ್ದು, ಪ್ರಸ್ತುತ ಆತನಿಗೆ ಉಸ್ಮಾನಿಯಾ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕಲ್ಪಿಸಲಾಗಿದೆ. ಆತನ ಸ್ಥಿತಿಯೂ ಚಿಂತಾಜನಕವಾಗಿದೆ. ಘಟನೆಯ ವೇಳೆ ಗಾಯಗೊಂಡಿದ್ದ ಕಚೇರಿ ಅಟೆಂಡರ್ ಚಂದ್ರಯ್ಯ ಅವರೂ ಸಹ ಅಪೋಲೋ ಡಿಆರ್ ಡಿಓ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 