ಸಂಚಾರಿ ನಿಯಮ ಪಾಲನೆ ನಮ್ಮೆಲ್ಲರ ಕರ್ತವ್ಯ : ಎಸ್ಪಿ
ಬಳ್ಳಾರಿ.16: ಸಂಚಾರಿ ನಿಯಮಗಳ ಪಾಲನೆ ಮತ್ತು ನಿರ್ವಹಣೆ ಮಾಡುವುದು ಕೇವಲ ಪೊಲೀಸ್ ಇಲಾಖೆಯ ಮಾತ್ರ ಸೀಮಿತ ಅಲ್ಲ, ಸಮಾಜದ ಪ್ರತಿಯೊಬ್ಬರ ಕರ್ತವ್ಯ ಹಾಗೂ ಜವಬ್ದಾರಿಯಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಸಿ.ಕೆ. ಬಾಬಾ ಅವರು ಹೇಳಿದರು.
ನಗರದ ಡಾ.ರಾಜ್ಕುಮಾರ್ ರಸ್ತೆಯಲ್ಲಿರುವ ಸೆಂಟನರಿ ಹಾಲ್ನಲ್ಲಿ ಮಂಗಳವಾರ ಸಂಜೆ ಬಳ್ಳಾರಿ ಸಂಚಾರಿ ಪೊಲೀಸ್ ಮತ್ತು ಸಾರಿಗೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ -2020 ಗೆ ಚಾಲನೆ ನೀಡಿ ಮಾತನಾಡಿದರು.
ರಾತ್ರಿ ವೇಳೆ ಸಂಚಾರ ಮಾಡುವ ಪ್ರಯಾಣಿಕರಿಗೆ ಹೆಚ್ಚಿನ ದರ ವಿಧಿಸುವುದು ಸರಿಯಲ್ಲ, ಮಾನವೀತೆಯ ದೃಷ್ಠಿಯಿಂದ ಪ್ರಯಾಣಿಕರೊಂದಿಗೆ ವತರ್ಿಸುವಂತೆ ಆಟೋ ಡ್ರೈವರ್ಗಳಿಗೆ ಸಲಹೆ ನೀಡಿದರು.
ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಮಲ್ನಾಡ್ ಅವರು ಮಾತನಾಡಿ, ಮೂಲ ದಾಖಲಾತಿಗಳಿಲ್ಲಿದೆ, ಪರವಾನಿಗೆ ಇಲ್ಲದೆ ಆಟೋ ಚಲಾಯಿಸುವುದು ಅಪರಾಧ. ಪರವಾನಿಗೆ ಇಲ್ಲದ ಚಾಲಕರು ಕಡ್ಡಾಯವಾಗಿ ಪರವಾನಿಗೆಯನ್ನು ಮಾಡಿಕೊಳ್ಳಬೇಕು ಎಂದರು. ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ನೊಂದಾಯಿತ ಆಟೋ ಚಾಲಕರಿಗೆ ಉಚಿತ ಕಣ್ಣಿನ ಪರೀಕ್ಷೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿ ರಾಮರಾವ್, ಎ.ಆರ್.ಟಿ.ಒ ಶ್ರೀನಿವಾಸ್. ಸನ್ಮಾರ್ಗ ಗೆಳೆಯರ ಬಳಗದ ಲಕ್ಷ್ಮೀಕಾಂತ್ರೆಡ್ಡಿ, ವಿಮ್ಸ್ನ ಜಿಲ್ಲಾ ನೇತ್ರಾ ಸಂಚಾರಿ ವೈದ್ಯರಾದ ಡಾ. ಅಂಜಿನೇಯ ಪ್ರಸಾದ್ ಸೇರಿದಂತೆ ಇತರೆ ಗಣ್ಯವ್ಯಕ್ತಿಗಳು ಇದ್ದರು.
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 