ಕಡಿಮೆ ಪರಿಹಾರ ದೊರೆಯಲು ರಾಜ್ಯ ಸರ್ಕಾರದ ವೈಫಲ್ಯವೇ ಕಾರಣ: ಸಿದ್ದರಾಮಯ್ಯ
ಮಂಗಳೂರು, ಅ 5: ರಾಜ್ಯದಲ್ಲಿ ಸಂಭವಿಸಿದ ಪ್ರವಾಹ ಪರಿಸ್ಥಿತಿಗೆ ಸೂಕ್ತ ಪರಿಹಾರ ಪಡೆಯಲು ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದ್ದು, ಕಡಿಮೆ ಪರಿಹಾರ ಘೋಷಣೆ ಹಿಂದೆ ರಾಜ್ಯ ಸರ್ಕಾರದ ನಿರ್ಲಕ್ಷ್ಯತೆ ಎದ್ದುಕಾಣುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೇಂದ್ರದಿಂದ ನೆರೆ ಪರಿಹಾರ ಸಂಬಂಧ ಕಡಿಮೆಯಾಗಲು ರಾಜ್ಯದ ವೈಫಲ್ಯವಿದೆ. ಕೇಂದ್ರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದರು.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂಬಂಧಿತ ತುರ್ತುನಿರ್ವಹಣೆಗೆ ಕೇಂದ್ರದ 1,200 ಕೋಟಿ ರೂಪಾಯಿ ಸಾಲದು. ಕನಿಷ್ಠ 5ಸಾವಿರ ಕೋಟಿ ರೂ ನೀಡಬೇಕಿತ್ತು ಎಂದರು.
ನೆರೆ ಬಂದು ಎರಡು ತಿಂಗಳ ಬಳಿಕ ಕೇಂದ್ರ ನೆರವು ಪ್ರಕಟಿಸಿದೆ. 38,000 ಕೋಟಿ ರೂಪಾಯಿ ನಷ್ಟ ಸಂಭವಿಸಿದ್ದು, ಕೇಂದ್ರ ಸರ್ಕಾರ ಕಡಿಮೆ ಮೊತ್ತ ಮಂಜೂರು ಮಾಡಿದೆ. ರಾಜ್ಯ ಸರಕಾರ ಸಕಾಲದಲ್ಲಿ ಕೇಂದ್ರದ ಮೇಲೆ ಒತ್ತಡ ಹಾಕಿದ್ದರೆ
ಹೀಗಾಗುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 