ವಿಜೃಂಭಣೆಯಿಂದ ಜರುಗಿದ ಭೈರೇಶ್ವರ, ಹನುಮಾನ ಮಲ್ಲಿಕಾರ್ಜುನ ದೇವರ ಜಾತ್ರೆ
The fair of Bhaireshwar, Hanuman and Mallikarjuna
ರಾಯಬಾಗ 17: ತಾಲೂಕಿನ ಬೊಮ್ಮನಾಳ ಗ್ರಾಮದ ಭೈರೇಶ್ವರ, ಹನುಮಾನ ಮತ್ತು ಮಲ್ಲಿಕಾರ್ಜುನ ದೇವರ ಜಾತ್ರೆಯು ವಿಜೃಂಭಣೆಯಿಂದ ಜರುಗಿತು.
ಗುರುವಾರ ವಿವಿಧ ಶರ್ಯತ್ತುಗಳು ಜರುಗಿದವು. ವಿಜೇತರಿಗೆ ಕಮಿಟಿಯಿಂದ ಬಹುಮಾನ ವಿತರಿಸಲಾಯಿತು. ಕುದುರೆ ಗಾಡಿ ಶರ್ಯತ್ತಿನಲ್ಲಿ ಕುಡಚಿಯ ಡೌನ ಪ್ರಥಮ, ಹುಬರಟ್ಟಿಯ ಅಶೋಕ ದ್ವಿತೀಯ, ಅಂಕಲಿಯ ಸಾಗರ ಮೇಸ್ತ್ರಿ ತೃತೀಯ ಹಾಗೂ ಶೇಡಷಾಳದ ಲಕ್ಷ್ಮಣ ನಾಯಿಕ ನಾಲ್ಕನೆಯ ಬಹುಮಾನ ಪಡೆದರು. ಸಾಯಕಲ್ ಶರ್ಯತ್ತಿನಲ್ಲಿ ಇಚಲಕರಂಜಿಯ ಬಾಳು ಹೀರೆಮಠ ಪ್ರಥಮ, ಬಡಿಗವಾಡದ ಮಾರುತಿ ದ್ವಿತೀಯ, ಕರಣ ಲಮಾಣಿ ತೃತೀಯ ಬಹುಮಾನ ಪಡೆದರು. ಚಿ
ಕುದುರೆ ಶರ್ಯತ್ತಿನಲ್ಲಿ ಚಿಂಚಲಿಯ ಸುರೇಶ ಪ್ರಥಮ, ಭಿರಡಿಯ ಮಹಾದೇವ ಈಟೇಕರಿ ದ್ವಿತೀಯ, ಚಿಂಚಲಿಯ ಕುಮಾರ ಪೂಜಾರಿ ತೃತೀಯ ಬಹುಮಾನ ಪಡೆದರು.ಓಡುವ ಶರ್ಯತ್ತಿನಲ್ಲಿ ಸುಲ್ತಾನಪೂರದ ಅಸ್ಲಾಂ ಮುಲ್ತಾನಿ ಪ್ರಥಮ, ಜಮಖಂಡಿಯ ನಾಗರಾಜ ದ್ವಿತೀಯ, ಸವಸುದ್ದಿಯ ಕಲ್ಲಪ್ಪ ನಾಯಿಕ ತೃತೀಯ ಬಹುಮಾನ ಪಡೆದರು.
ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ರಮೇಶ ಪಾಟೀಲ, ಸತ್ಯಗೌಡ ಪಾಟೀಲ, ಸತೀಶ ಬಾಗಿ, ನಿಂಗೌಡ ಪಾಟೀಲ, ಅಲಿಸಾಬ ನದಾಫ, ಅರುಣ ವಡ್ಡರ, ಶಿವಗೌಡ ಪಾಟೀಲ, ರಾಮಗೌಡ ಪಾಟೀಲ, ಎನ್.ಎಸ್.ಪಾಟೀಲ, ಕಲ್ಲಪ್ಪ ಪಾಟೀಲ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 