ಮೇ 23ರಂದು ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರ ಬಿಡುಗಡೆ
The film 'Kuladdi Keelyavudo' will be released on May 23rd.
ಮೇ 23ರಂದು ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರ ಬಿಡುಗಡೆ
ಕೊಪ್ಪಳ 03: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ ಕೆ.ರಾಮನಾರಾಯಣ್ ನಿರ್ದೇಶನದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರ ಮೇ 23ಕ್ಕೆ ರಾಜ್ಯಾದಾದ್ಯಂತ ತೆರೆ ಕಾಣಲಿದೆ.
ಶನಿವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಚಿತ್ರದ ನಾಯಕ ಮಡೆನೂರ್ ಮನು ಕನ್ನಡ ಕಲಾಭಿಮಾನಿಗಳೇ ಕುಟುಂಬ ಸಮೇತರಾಗಿ ಚಿತ್ರಮಂದಿರಕ್ಕೆ ಬನ್ನಿ ಚಿತ್ರವನ್ನು ನೋಡಿ ಹರಿಸಿ ನಿಮ್ಮ ಬರುವಿಕೆಗೆ ಕಾಯುತ್ತಿದೆ ನಮ್ಮ ಕ್ಷೇತ್ರ ತಂಡ, ಈ ಚಿತ್ರ ಲವ್, ಮಾಸ್, ಮನೋರಂಜನೆ ಒಳಗೊಂಡ ಚಿತ್ರವಾಗಿದೆ. ಮನೋಮೂರ್ತಿ ಸಂಗೀತ ಸಂಯೋಜಿಸಿದ್ದು, ಚೇತನ್ ಹಾಡಿದ್ದಾರೆ. ‘ಈ ಗೀತೆಯಲ್ಲಿ ಯೋಗರಾಜ್ ಭಟ್ ಅಭಿನಯಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿವೆ’ ಎಂದರು ಖ್ಯಾತ ನಿರ್ದೇಶಕರು.
ಯೋಗರಾಜ್ ಸಿನಿಮಾಸ್ ಅರ್ಿಸುತ್ತಿರುವ ಈ ಚಿತ್ರಕ್ಕೆ ಪರ್ಲ್ ಸಿನಿ ಕ್ರಿಯೇಷನ್ಸ್ ಬಂಡವಾಳ ಹೂಡಿದೆ ರಾಜ್ಯದ ಜನತೆ ಚಲನಚಿತ್ರವನ್ನು ನೋಡಿ ಪ್ರೋತ್ಸಾಹಿಸುವಂತೆ ತಿಳಿಸಿದರು. ಚಿತ್ರದ ತಾರಾಬಳಗದಲ್ಲಿ ಮೌನ ಗುಡ್ಡೆಮನೆ ಚಿತ್ರದ ನಾಯಕಿ, ಶರತ್ ಲೋಹಿತಾಶ್ವ, ತಬಲನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಬ್ಯಾಂಕ್ ಜನಾರ್ಧನ್, ಹಾಸ್ಯ ನಟ ಉಮೇಶ್, ಡ್ಯಾಗನ್ ಮಂಜು, ಸೀನ ಮುಂತಾದವರು ಇದ್ದಾರೆ. ಸುದ್ದಿಗೋಷ್ಠಿಯಲ್ಲಿ ಗಂಗಾಧರ್, ಪಟಾಕಿ ಬಸವರಾಜ್ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 