ಮರಿಹೊತ್ತ ಚೇಳು" ಚಿತ್ರಕ್ಕೆ ಪ್ರಥಮ ಬಹುಮಾನ
ಲೋಕದರ್ಶನವರದಿ
ರಾಣೇಬೆನ್ನೂರು೧೯: ಬಳ್ಳಾರಿ ಜಿಲ್ಲೆಯ ಹಂಪಿ ಉತ್ಸವದ ಅಂಗವಾಗಿ ಏರ್ಪಡಿಸಿದ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಯಲ್ಲಿ ವನ್ಯಜೀವಿ ಛಾಯಾಗ್ರಾಹಕ ನಾಮದೇವ ಕಾಗದಗಾರ ಸೆರೆಹಿಡಿದ "ಮರಿಹೊತ್ತ ಚೇಳಿಗೆ" ಪ್ರಥಮ ಬಹುಮಾನ ಲಭಿಸಿದೆ.
ವನ್ಯ ಜೀವಿ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದ ನಾಮದೇವ ಕಾಗದಗಾರ ರವರಿಗೆ ಬಳ್ಳಾರಿ ಜಿಲ್ಲಾ ಪಂಚಾಯತಿಯ ಸಿಇಓ ಕೆ.ನಿತೀಶ ರವರು ತಮ್ಮ ಕಛೇರಿಯಲ್ಲಿ 25 ಸಾವಿರ ನಗದು, ಪ್ರಮಾಣ ಪತ್ರ ಹಾಗೂ ಸ್ಮರಣಿಕೆ ನೀಡಿ ಗೌರವಿಸಿದರು.
ಹಿರಿಯ ಪತ್ರಕರ್ತ ಸಿ.ಮಂಜುನಾಥ ಹಾಗೂ ಸಹಾಯಕ ಕಾರ್ಯ ನಿರ್ವಾಹಕರು ಸೇರಿದಂತೆ ಜಿಲ್ಲಾ ಪಂಚಾಯಿತಿಯ ಸಿಬ್ಭಂದಿ ವರ್ಗ ಉಪಸ್ಥಿತರಿದ್ದರು.
ನಂತರದಲ್ಲಿ ಬಳ್ಳಾರಿ ವಲಯದ ಪೋಲಿಸ್ ಮಹಾನಿದರ್ೇಶಕ ಎಂ.ನಂಜುಂಡಸ್ವಾಮಿಯವರು ನಾಮದೇವ ಕಾಗದಗಾರ ರವರ ಈ ಸಾಧನೆಯನ್ನು ಮೆಚ್ಚಿ ತಮ್ಮ ಕಛೇರಿಗೆ ಆಹ್ವಾನಿಸಿ ಅಭಿನಂದಿಸಿದರು.
ನಾಮದೇವ ಕಾಗದಗಾರ ಅವರ ಕ್ಷೇತ್ರ ಸಾಧನೆಗೆ ವನ್ಯ ಜೀವಿ ಛಾಯಾಗ್ರಾಕರಾದ ಚಂದ್ರು ಶಿಡೇನೂರ, ಹರೀಶ್ ಬಡಿಗೇರ, ಟಿ.ಶಿವಕುಮಾರ ಹಾಗೂ ಕಾಗದ ಸಾಂಗತ್ಯದ ಗೆಳೆಯರು, ಸಾಹಿತಿಗಳು, ಪತ್ರಕರ್ತರು ಅಭಿನಂದಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 