ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯ ರಚನೆ ಅಪ್ರಜಾತಾಂತ್ರಿಕ! - ಎಐಡಿಎಸ್‌ಓ

ಬಳ್ಳಾರಿ 05:ಸತತವಾಗಿ ಶೈಕ್ಷಣಿಕವಾಗಿ ಹಿಂದುಳಿಯುತ್ತಿರುವ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಆರು ಜನ ತಜ್ಞರ ಸಮಿತಿಯನ್ನು ಸರ್ಕಾರ  ರಚಿಸಿದೆ.ಶೈಕ್ಷಣಿಕ ಗುಣಮಟ್ಟವನ್ನು ಸುಧಾರಣೆ ಮಾಡಬೇಕೆಂದರೆ ಆ ಭಾಗದ ಶಿಕ್ಷಣ  ತಜ್ಞರ ಮತ್ತು ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಆದರೆ  ಕಲ್ಯಾಣ ಕರ್ನಾಟಕ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಸರ್ಕಾರ ರಚಿಸಿರುವ ಸಮಿತಿಯಲ್ಲಿ ಈ ಭಾಗದ ಶಿಕ್ಷಣ ತಜ್ಞರು, ಶಿಕ್ಷಕರಿಲ್ಲ ಬದಲಾಗಿ ದೊಡ್ಡ ದೊಡ್ಡ ಖಾಸಗಿ ಸಂಸ್ಥೆಗಳ ಹಾಗೂ ಖಾಸಗಿ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳನ್ನು ಸಮಿತಿಯಲ್ಲಿರಿಸಲಾಗಿದೆ. ಇದು ಅತ್ಯಂತ ಅವೈಜ್ಞಾನಿಕ ಮತ್ತು ಪ್ರಶ್ನೆ ಹುಟ್ಟಿಸುವ ನಡೆಯಾಗಿದೆ.  

ಶಿಕ್ಷಣ ತಜ್ಞರು, ಶಿಕ್ಷಕರಿಲ್ಲದೆ ಈ ಭಾಗದ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಾಗಲು ಸಾಧ್ಯವಿಲ್ಲ. ಇದನ್ನು ವಿದ್ಯಾರ್ಥಿಗಳು ಶಿಕ್ಷಣ ಪ್ರೇಮಿಗಳು ಪೋಷಕರು ಒಪ್ಪುವುದಿಲ್ಲ. ಆದ್ದರಿಂದ ಈ ಭಾಗದ ಶೈಕ್ಷಣಿಕ ಗುಣಮಟ್ಟದ ಹಿತದೃಷ್ಟಿಯಿಂದ ಕೂಡಲೇ ಈ ಸಮಿತಿಯನ್ನು ಪ್ರಜಾತಾಂತ್ರಿಕವಾಗಿ, ವೈಜ್ಞಾನಿಕ ದೃಷ್ಟಿಕೋನದಿಂದ ಈ ಭಾಗದ ಶಿಕ್ಷಣ ತಜ್ಞರು ಶಿಕ್ಷಕರು ನಿವೃತ್ತ ಪ್ರಾಧ್ಯಾಪಕರನ್ನು ಒಳಗೊಂಡ ಸಮಿತಿಯನ್ನು ಪುನರಚಿಸಬೇಕೆಂದು ಎಐಡಿಎಸ್‌ಓ ವಿದ್ಯಾರ್ಥಿ ಸಂಘಟನೆಯು ಆಗ್ರಹಿಸುತ್ತದೆ.