ಶಾಸಕರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ: ಸಿದ್ದರಾಮಯ್ಯ
ಬೆಂಗಳೂರು,ಜ 31,ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ವಿಧಾನ ಪರಿಷತ್ ಅಧ್ಯಕ್ಷ ಪ್ರತಾಪ್ ಚಂದ್ರ ಶೆಟ್ಟಿ ಅವರು ರಾಜ್ಯಪಾಲರ ಭಾಷಣಕ್ಕೆ ವಿರುದ್ಧವಾಗಿ ಮಾತನಾಡುವುದನ್ನು ವಿರೋಧಿಸಲು ಆಜ್ಞೆಯನ್ನು ಹೊರಡಿಸುವ ಹಕ್ಕನ್ನು ಹೊಂದಿಲ್ಲ. ಅವರು ಸದಸ್ಯರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ.
ಜಂಟಿ ಅಧಿವೇಶನದ ವೇಳೆ ರಾಜ್ಯಪಾಲರ ಭಾಷಣಕ್ಕೆ ಯಾವುದೇ ಸದಸ್ಯರು ಅಡ್ಡಿಪಡಿಸುವುದು ಇಲ್ಲವೇ ಕ್ರಿಯಾಲೋಪ ಎತ್ತಿದರೆ ಅಂತಹ ಸದಸ್ಯರನ್ನು ಅಮಾನತುಪಡಿಸುವುದಾಗಿ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೊರಡಿಸಿರುವ ಅಧಿಸೂಚನೆಗೆ ಕಿಡಿಕಾರಿದ ಅವರು, ಕಳೆದ 6 ವರ್ಷಗಳಿಂದ ಬಿಜೆಪಿ ಸರ್ಕಾರ ನಡೆಸುತ್ತಿದೆ. ಅವರು ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದರೆ, ನಾವು ಆದರ್ಶ ಸಮಾಜವನ್ನು ನೋಡಬೇಕಿತ್ತು. ಆದರೆ ಬಿಜೆಪಿ ಒಂದು ಶತಕೋಟಿ ಜನರ ಕನಸುಗಳನ್ನು ಚೂರುಚೂರು ಮಾಡಿದೆ. ಅವರ ಸ್ವರ್ಗದ ಕನಸು ಈಗ ನರಕಕ್ಕೆ ತಿರುಗಿದೆ. ಯುವಕರು ನಿರುದ್ಯೋಗಿಗಳು, ಬೆಲೆಗಳು ಗಗನಕ್ಕೇರಿವೆ, ಜಿಡಿಪಿ ಬೆಳವಣಿಗೆ ಕುಸಿಯುತ್ತಿದೆ, ರಫ್ತು ಕುಸಿದಿದೆ ಎಂದು ಟೀಕಿಸಿದರು.ಸಂಘ ಪರಿವಾರದ ಗಾಂಧೀಜಿಯನ್ನು ಕೊಂದರು. ಈಗ ಅದೇ ಸಂಘ ಪರಿವಾರದಿಂದ, ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ಪ್ರತಿಭಟನಕಾರರ ಮೇಲೆ ಗೂಂಡಾ ಗುಂಡು ಹಾರಿಸಿದ್ದು ಏಕೆ? ಎಂದು ಟ್ವಿಟ್ಟರ್ನಲ್ಲಿ ಪ್ರಶ್ನಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 