ಲಾಕ್ ಡೌನ್ ಇಡೀ ರಾಜ್ಯಕ್ಕೆ ವಿಸ್ತರಿಸಲು ಸರ್ಕಾರ ಚಿಂತನೆ
ಬೆಂಗಳೂರು, ಮಾ. 23, ಕೊರೋನಾ ಸೋಂಕು ಕಂಡುಬಂದ 9 ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ 'ಲಾಕ್ಡೌನ್' ತೀರ್ಮಾನಕ್ಕೆ ಜನರು ಅಸಡ್ಡೆ ತೋರಿದ ಹಿನ್ನೆಲೆಯಲ್ಲಿ ಈ ಆದೇಶ ಇಡೀ ರಾಜ್ಯಕ್ಕೆ ವಿಸ್ತರಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯ ಸರ್ಕಾರದ ಮಹತ್ವದ ತುರ್ತು ಸಭೆ ನಡೆಸಿದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದರು.ನಿನ್ನೆ 9 ಜಿಲ್ಲೆಗಳಲ್ಲಿ ಲಾಕ್ ಡೌನ್ ಆದೇಶಿಸಲಾಗಿತ್ತು. ಆದರೆ ಈ ಬಗ್ಗೆ ಜನರಿಂದ ಸರಿಯಾದ ಪ್ರತಿಕ್ರಿಯೆ ಹಾಗೂ ಜನರು ಎಚ್ಚೆತ್ತುಕೊಳ್ಳದ ಕಾರಣ ರಾಜ್ಯಾದ್ಯಂತ ಲಾಕ್ ಡೌನ್ ವಿಸ್ತರಣೆಗೆ ಮುಂದಾಗಿದೆ.ಈ ಬಗ್ಗೆ ಇಂದು ಸಂಜೆ ಮತ್ತೊಂದು ಸಭೆ ಬಳಿಕ ಇಡೀ ರಾಜ್ಯಕ್ಕೆ ಲಾಕ್ಡೌನ್ ವಿಸ್ತರಣೆ ಬಗ್ಗೆ ಚರ್ಚೆ ನಡೆಸುತ್ತೇವೆ. ಈಗಾಗಲೇ ಜನರ ಓಡಾಟ ಹೆಚ್ಚಾಗಿದೆ. ಇದು ನಮ್ಮ ಗಮನಕ್ಕೆ ಬಂದಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಹಾಗಾಗಿ ಸಂಜೆ ರಾಜ್ಯವೇ ಲಾಕ್ ಡೌನ್ ಮಾಡಿವ ಬಗ್ಗೆ ಸಭೆ ಸೇರಿ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 