ದುಡಿದು ದಾಸೋಹ ಮಾಡುವುದು ಶ್ರೇಷ್ಠವಾದದ್ದು : ಶಾಂತಬೀಷ್ಮ ಚೌಡಯ್ಯ ಶ್ರೀಗಳು,
The greatest thing is to work and do Dasoha : Mr. Shantabishma Choudaiah
ದುಡಿದು ದಾಸೋಹ ಮಾಡುವುದು ಶ್ರೇಷ್ಠವಾದದ್ದು : ಶಾಂತಬೀಷ್ಮ ಚೌಡಯ್ಯ ಶ್ರೀಗಳು
ಶಿಗ್ಗಾವಿ 06 : ಧಾನ ಧರ್ಮ ದತ್ತಿಗಳನ್ನು ಮಾಡಿ ಸತ್ಕಾರ್ಯಕ್ಕೆ ಹೋಗಬೇಕಾದರೆ ದುಡಿದು ದಾಸೋಹ ಮಾಡಬೇಕು ಅದು ಶ್ರೇಷ್ಠವಾದದ್ದು ಎಂದು ಜಗದ್ಗುರು ಶಾಂತಬೀಷ್ಮ ಚೌಡಯ್ಯ ಮಹಾಸ್ವಾಮಿಗಳು ಹೇಳಿದರು.
ಪಟ್ಟಣದ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಧರ್ಮಸಭೆ ಸಾನಿಧ್ಯವಹಿಸಿ ಮಾತನಾಡಿದ ಅವರು ವಿಶಾಲವಾದ ಹೃದಯ ನಮ್ಮದಾಗಿರಬೇಕು ಮತ್ತು ವಿಶಾಲ ವೈಶ್ಯಲತೆಯೊಂದಿಗೆ ಹೃದಯ ವಾತ್ಸಲ್ಯತೆಯನ್ನು ಅಳವಡಿಸಿಕೊಂಡು ತನು ಮನವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದರು.
ಸೀತಾಗಿರಿ ಡಾ.ಎ.ಸಿ.ವಾಲಿ ಮಹಾರಾಜರು ಮಾತನಾಡಿ ಸರ್ವ ಜನಾಂಗದದವರು ಸೇರಿ ಸಂಘಟನೆ ಮಾಡಿ ಮತ್ತೊಮ್ಮೆ ವಿವಿಧ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಮಾಡುತ್ತಿರುವ ಕಾರ್ಯ ಶ್ಲಾಘನೀಯ ಇದರಿಂದ ನಮಗೆಲ್ಲ ಅರ್ಥವಾಗುವುದು ಧರ್ಮ ಇನ್ನೂ ಜೀವಂತವಿದೆ ಎಂದರು.
ಗುಳೇದಗುಡ್ಡ ಡಾ. ನೀಲಕಂಠ ಶಿವಾಚಾರ್ಯ ಅಮರೇಶ್ವರ ಬ್ರಹ್ಮನಠ ಶ್ರೀಗಳು ಮಾತನಾಡಿ 21 ನೇ ಶತಮಾನದಲ್ಲಿ ಧರ್ಮ ಅಳಿವಿನ ಅಂಚಿಗೆ ಹೋಗುತ್ತಿರುವ ಕಾರಣ ಈ ಧರ್ಮಸಭೆ ಕಾರ್ಯಕ್ರಮ ಯಶಸ್ವಿಯಾಗಿದೆ, ಸಮಾಜದಲ್ಲಿ ಅನೇಕ ಸಂಬಂಧಗಳಿವೆ ಆ ಸಂಭಂದಗಳ ಕೊಂಡಿ ಕಳಚದಂತೆ ನಾವೆಲ್ಲರೂ ಕಾಪಾಡಿಕೊಳ್ಳಬೇಕು ಮತ್ತು ದೇವರು ಎಲ್ಲಿದ್ದಾನೆ ನಮ್ಮ ಆತ್ಮವೇ ದೇವಾಲಯ ಅನ್ನು ಶುದ್ಧ ಹಾಗೂ ಸ್ವಚ್ಚವಾಗಿಟ್ಟುಕೊಳ್ಳಬೇಕು ಎಂದರು.
ಮಹಾಂತಶರಣರು,ಪುರಸಭೆ ಸದಸ್ಯ ಪರುಶರಾಮ ಸೊನ್ನದ, ವರದಿಗಾರ ದೇವರಾಜ ಸುಣಗಾರಮಾತನಾಡಿದರು. ಪುರಾಣ ಪ್ರವಚನವನ್ನು ಪ್ರಭಯ್ಯ ಶಾಸ್ತ್ರೀ ಹಿರೇಮಠ, ಶಿವಾನಂದ ಮಂದೇವಾಲ, ಬಸವರಾಜ ಚಳಗೇರಿ ಸಂಗೀತ ಸೇವೆ ಜರುಗಿತು. ದಾನಿಗಳನ್ನು ಸನ್ಮಾನಿಸಲಾಯಿತು. ನಟರಾಜ ನಾಟ್ಯ ಕಲಾ ಸಂಸ್ಥೆ ವಿಧ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.
ಮಲ್ಲೇಶಪ್ಪ ಅತ್ತಿಗೇರಿ, ಶಿದ್ರಾಮಪ್ಪ ಯಲಿಗಾರ, ಉಮೇಶ ಗೌಳಿ, ಮಂಜುನಾಥ ದುಭೆ, ರಾಮಣ್ಣ ಅಂದಲಗಿ, ಹೊನ್ನಪ್ಪ ಹಾಳಿ, ಗುಡ್ಡಪ್ಪ ಸುಣಗಾರ, ವಿರೇಂದ್ರ ಬಳಿಗಾರ, ರಾಜಣ್ಣ ಕೊಪ್ಪಳ, ಪಕ್ಕೀರ್ಪ ಕಾಂಬಳೆ, ಸದಾಶಿವಯ್ಯ ಹಿರೇಮಠ, ವಿರುಪಾಕ್ಷಪ್ಪ ನೀರಲಗಿ, ಸುಶೀಲ ಹಿರೇಮಠ ಸೇರಿದಂತೆ ಸದ್ಬಕ್ತರು ಉಪಸ್ಥಿತರಿದ್ದರು. ಸುಭಾಸ ಚವ್ಹಾಣ ಸ್ವಾಗತಿಸಿದರು, ಪ್ರೋ ಶಶಿಕಾಂತ ರಾಠೋಡ ಶಿಕ್ಷಕಿ ಗಂಗೂಭಾಯಿ ದೇಸಾಯಿ ಕಾರ್ಯಕ್ರಮ ನಿರ್ವಹಿಸಿದರು.
ಭಾಕ್ಸ ಸುದ್ದಿ : ಪಟ್ಟಣದ ಶವ ಸಂಸ್ಕಾರ ಮಾಡುವ ಪಕ್ಕೀರ್ಪ ಕಟ್ಟಿಮನಿ ಅವರನ್ನು ಮೈಲಾರಲಿಂಗೇಶ್ವರ ಸಮಿತಿವತಿಯಿಂದ ಗೌರವ ಸನ್ಮಾನ ಮಾಡಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 