ಜನರ ಕಷ್ಟ ಕೇಳಲು ಹೋದ ಸಂಸದರೇ ನೀರು ಪಾಲು..!!
ಪಾಟ್ನಾ, ಅ 3: ಪ್ರವಾಹ ಪೀಡಿತ ಜನರ ಕಷ್ಟ ಕೇಳಲು ಹೋದ ಬಿಜೆಪಿ ಸಂಸದ ರಾಮ್ ಕೃಪಾಲ್ ಯಾದವ್ ಪರಿಸ್ಥಿತಿ ಪರಾಮರ್ಶಿ ಸಮಯದಲ್ಲಿ ಆಯತಪ್ಪಿ ನೀರಿಗೆ ಬಿದ್ದಿದ್ದು ಅವರನ್ನು ಸ್ಥಳೀಯ ಜನರೇ ರಕ್ಷಣೆ ಮಾಡಿದ್ದಾರೆ. ಈ ನಡುವೆ ಗುರುವಾರ ಮತ್ತು ಶುಕ್ರವಾರ ಮಳೆಯ ಅಬ್ಬರ ಮುಂದುವರಿಯಲಿದೆ ಎಂದೂ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಕಾರಣ ಪಾಟ್ನಾದಲ್ಲಿ ಶಾಲಾ ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ಹೇಳಿವೆ. ಪಾಟಲಿಪುರ ಕ್ಷೇತ್ರದ ಸಂಸದ ರಾಮ್ ಕೃಪಾಲ್ ಯಾದವ್ ದೋಣಿಯ ಮೇಲೆ ನಿಂತು ಪ್ರವಾಹ ಪೀಡಿತ ಪ್ರದೇಶಗಳ ಪರಿಸ್ಥಿತಿ ವೀಕ್ಷಣೆ ಮಾಡುತ್ತಿದ್ದಾಗ ಆಯತಪ್ಪಿ ದೋಣಿ ಮಗುಚಿಕೊಂಡ ಪರಿಣಾಮ ಸಂಸದರು ಸೇರಿದಂತೆ ಹಲವರು ನೀರಿನೊಳಕ್ಕೆ ಬಿದ್ದಿದ್ದರು. ಇದೇ ವೇಳೆ ನಿತೀಶ್ ಕುಮಾರ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ ಅವರು, ಪ್ರವಾಹ ಪೀಡಿತ ಗ್ರಾಮೀಣ ಪ್ರದೇಶಗಳನ್ನು ಸರ್ಕಾರ ಕಡೆಗಣಿಸಿದೆ. ಆಹಾರದ ಸಮಸ್ಯೆಯಿಂದ ಜನರು ಬಳಲುತ್ತಿದ್ದಾರೆ. ಜಾನುವಾರುಗಳು ನೀರುಪಾಲಾಗಿವೆ. ಜನರನ್ನು ರಕ್ಷಿಸಲು ಸಮರ್ಪಕ ಸೌಲಭ್ಯಗಳಿಲ್ಲ. ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಸರಿಯಾಗಿ ದೋಣಿಯ ವ್ಯವಸ್ಥೆ ಕೂಡ ಮಾಡಿರಲಿಲ್ಲ ಎಂದೂ ಸಹ ಅವರು ದೂರಿದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 