ಬೆಂಗಳೂರಿನ ಹಲವೆಡೆ ಐಟಿ ಅಧಿಕಾರಿಗಳ ಭರ್ಜರಿ ಬೇಟೆ
ಬೆಂಗಳೂರು 30: ನಗರದ ಮೂರು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿ ಅವಿನಾಶ್ ಅಗವರ್ಾಲ್ ಬೌರಿಂಗ್ ಇನ್ಸ್ಟಿಟ್ಯೂಟ್ನ ಲಾಕರ್ನಲ್ಲಿ ಇಟ್ಟಿದ್ದ ದಾಖಲೆಗಳು ಪತ್ತೆಯಾದ ನಂತರ ಈ ದಾಳಿ ನಡೆಸಲಾಗಿದೆ.
ಬಿಜೆಪಿ ನಾಯಕ ಜಿ ಪ್ರಸಾದ್ ರೆಡ್ಡಿ ಅವರಿಗೆ ಸೇರಿದ ಮೂರು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪ್ರಸಾದ್ ರೆಡ್ಡಿಯ ಮನೆ, ಕಚೇರಿ ಮತ್ತು ಪ್ರಸಾದ್ ರೆಡ್ಡಿ ಆಪ್ತ ಸೈಯದ್ ಅಲೀಮುದ್ದೀನ್ ಮನೆಯ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ. ಮೂರೂ ಕಡೆ ಐಟಿ ಅಧಿಕಾರಿಗಳಿಗೆ ಮಹತ್ವದ ದಾಖಲೆಗಳು ಸಿಕ್ಕಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಮುಖಂಡರಾಗಿರುವ ಜಿ.ಪ್ರಸಾದ್ ರೆಡ್ಡಿ ಜೊತೆಗೆ ಉದ್ಯಮಿ ಅವಿನಾಶ್ ಅಗರ್ ವಾಲ್ ವ್ಯವಹಾರ ಮಾಡಿದ್ದರು. ಅವಿನಾಶ್ ಮಾಲೀಕತ್ವದ ಅನುಷ್ಕಾ ಎಸ್ಟೇಟ್ಸ್ನಿಂದ ಪ್ರಸಾದ್ ರೆಡ್ಡಿಗೆ ಸೇರಿದ ಹಲವು ನಿವೇಶನಗಳನ್ನು ಖರೀದಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 