ಬೆಂಗಳೂರಿನ ಹಲವೆಡೆ ಐಟಿ ಅಧಿಕಾರಿಗಳ ಭರ್ಜರಿ ಬೇಟೆ
ಬೆಂಗಳೂರು 30: ನಗರದ ಮೂರು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿ ಅವಿನಾಶ್ ಅಗವರ್ಾಲ್ ಬೌರಿಂಗ್ ಇನ್ಸ್ಟಿಟ್ಯೂಟ್ನ ಲಾಕರ್ನಲ್ಲಿ ಇಟ್ಟಿದ್ದ ದಾಖಲೆಗಳು ಪತ್ತೆಯಾದ ನಂತರ ಈ ದಾಳಿ ನಡೆಸಲಾಗಿದೆ.
ಬಿಜೆಪಿ ನಾಯಕ ಜಿ ಪ್ರಸಾದ್ ರೆಡ್ಡಿ ಅವರಿಗೆ ಸೇರಿದ ಮೂರು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪ್ರಸಾದ್ ರೆಡ್ಡಿಯ ಮನೆ, ಕಚೇರಿ ಮತ್ತು ಪ್ರಸಾದ್ ರೆಡ್ಡಿ ಆಪ್ತ ಸೈಯದ್ ಅಲೀಮುದ್ದೀನ್ ಮನೆಯ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ. ಮೂರೂ ಕಡೆ ಐಟಿ ಅಧಿಕಾರಿಗಳಿಗೆ ಮಹತ್ವದ ದಾಖಲೆಗಳು ಸಿಕ್ಕಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಮುಖಂಡರಾಗಿರುವ ಜಿ.ಪ್ರಸಾದ್ ರೆಡ್ಡಿ ಜೊತೆಗೆ ಉದ್ಯಮಿ ಅವಿನಾಶ್ ಅಗರ್ ವಾಲ್ ವ್ಯವಹಾರ ಮಾಡಿದ್ದರು. ಅವಿನಾಶ್ ಮಾಲೀಕತ್ವದ ಅನುಷ್ಕಾ ಎಸ್ಟೇಟ್ಸ್ನಿಂದ ಪ್ರಸಾದ್ ರೆಡ್ಡಿಗೆ ಸೇರಿದ ಹಲವು ನಿವೇಶನಗಳನ್ನು ಖರೀದಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 