ಬೆಂಗಳೂರಿನ ಹಲವೆಡೆ ಐಟಿ ಅಧಿಕಾರಿಗಳ ಭರ್ಜರಿ ಬೇಟೆ
ಬೆಂಗಳೂರು 30: ನಗರದ ಮೂರು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿ ಅವಿನಾಶ್ ಅಗವರ್ಾಲ್ ಬೌರಿಂಗ್ ಇನ್ಸ್ಟಿಟ್ಯೂಟ್ನ ಲಾಕರ್ನಲ್ಲಿ ಇಟ್ಟಿದ್ದ ದಾಖಲೆಗಳು ಪತ್ತೆಯಾದ ನಂತರ ಈ ದಾಳಿ ನಡೆಸಲಾಗಿದೆ.
ಬಿಜೆಪಿ ನಾಯಕ ಜಿ ಪ್ರಸಾದ್ ರೆಡ್ಡಿ ಅವರಿಗೆ ಸೇರಿದ ಮೂರು ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಪ್ರಸಾದ್ ರೆಡ್ಡಿಯ ಮನೆ, ಕಚೇರಿ ಮತ್ತು ಪ್ರಸಾದ್ ರೆಡ್ಡಿ ಆಪ್ತ ಸೈಯದ್ ಅಲೀಮುದ್ದೀನ್ ಮನೆಯ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ. ಮೂರೂ ಕಡೆ ಐಟಿ ಅಧಿಕಾರಿಗಳಿಗೆ ಮಹತ್ವದ ದಾಖಲೆಗಳು ಸಿಕ್ಕಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಮುಖಂಡರಾಗಿರುವ ಜಿ.ಪ್ರಸಾದ್ ರೆಡ್ಡಿ ಜೊತೆಗೆ ಉದ್ಯಮಿ ಅವಿನಾಶ್ ಅಗರ್ ವಾಲ್ ವ್ಯವಹಾರ ಮಾಡಿದ್ದರು. ಅವಿನಾಶ್ ಮಾಲೀಕತ್ವದ ಅನುಷ್ಕಾ ಎಸ್ಟೇಟ್ಸ್ನಿಂದ ಪ್ರಸಾದ್ ರೆಡ್ಡಿಗೆ ಸೇರಿದ ಹಲವು ನಿವೇಶನಗಳನ್ನು ಖರೀದಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 