ಜಾಗತಿಕ ಆರ್ಥಿಕ ಕುಸಿತದಿಂದ ಕೃಷಿ ಉದ್ಯಮಕ್ಕೆ ಹೊಡೆತ: ಠಾಕೂರ್
ನವದೆಹಲಿ, ಫೆ 10 : ಜಾಗತಿಕ ಆರ್ಥಿಕ ಹಿನ್ನೆಡೆಯಿಂದಾಗಿ ಕೃಷಿ ಮತ್ತು ಕೃಷಿ ಆಧಾರಿತ ಕೈಗಾರಿಕೆಗಳು ಮತ್ತು ಸೇವೆಗಳು ಹೊಡೆತಕ್ಕೆ ಒಳಗಾಗಿದೆ ಎಂದು ಸರ್ಕಾರ ಸೋಮವಾರ ಸಂಸತ್ತಿಗೆ ತಿಳಿಸಿದೆ.
ಈ ಪರಿಸ್ಥಿತಿಯನ್ನು ಸರ್ಕಾರ ಮನಗಂಡು ಕಾರ್ಪೊರೇಟ್ ತೆರಿಗೆಯನ್ನು ಕಡಿಮೆ ಮಾಡಿದೆ ಎಂದು ಲೋಕಸಭೆಯಲ್ಲಿ ಹಣಕಾಸು ಖಾತೆ ಸಹಾಯಕ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ದೇಶದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿಸುವ 3 ಲಕ್ಷ ಕೋಟಿ ರೂಪಾಯಿಗಳ ರಾಷ್ಟ್ರೀಯ ಮೂಲಸೌಕರ್ಯ ಯೋಜನೆಯನ್ನೂ ಪ್ರಾರಂಭಿಸಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.
ಜಾಗತಿಕ ಜಿಡಿಪಿ ಶೇಕಡಾ 2.9 ರಷ್ಟಿದೆ, ಭಾರತದ ಬೆಳವಣಿಗೆಯ ದರವು ಶೇಕಡಾ 5 ರಷ್ಟಿದೆ ಎಂದು ಸಚಿವರು ಸಮಜಾಯಿಷಿ ನೀಡಿದರು.
ಪರಿಸ್ಥಿತಿ ಸುಧಾರಿಸಲು ಸರ್ಕಾರ ಬ್ಯಾಂಕ್ ಮರು ಬಂಡವಾಳೀಕರಣಕ್ಕಾಗಿ 3.5 ಲಕ್ಷ ಕೋಟಿ ರೂಪಾಯಿ ಮತ್ತು ಎನ್ಬಿಎಫ್ಸಿ ವಲಯದಲ್ಲಿ 1.1 ಲಕ್ಷ ಕೋಟಿ ರೂಪಾಯಿ ಒದಗಿಸಿದ್ದು ಪರಿಣಾಮವಾಗಿ ಬ್ಯಾಂಕುಗಳು ಫಲ ಕೊಡುವೆ ಹಾದಿಯಲ್ಲಿ ಸಾಗಿವೆ ಎಂದು ತಿಳಿಸಿದರು.
ಹಿಂದಿನ ಆಡಳಿತದಲ್ಲಿ ದ್ವಿಗುಣದಲ್ಲಿದ್ದ ಹಣದುಬ್ಬರ ಈಗ 4.1 ಕ್ಕೆ ಇಳಿದಿದೆ ಮತ್ತು ಹಣಕಾಸಿನ ಕೊರತೆಯೂ ಶೇಕಡಾ 3.8 ಕ್ಕೆ ಇಳಿದಿದೆ ಎಂದು ಅವರು ಹೇಳಿದರು.
ಭಾರತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಭಾರತದ ಮೇಲೆ ಇತರ ದೇಶಗಳ ನಂಬಿಕೆ ಹೆಚ್ಚುತ್ತಿದೆ ಇದು ಉತ್ತಮ ಮತ್ತು ಪ್ರಗತಿಯ ಸಂಕೇತ ಎಂದು ಸಚಿವರು ಸ್ಪಷ್ಟಪಡಿಸಿದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 