ಅದ್ದೂರಿಯಾಗಿ ನಡೆದ ಗ್ರಾಮೀಣ- ನಗರ ಅಧ್ಯಕ್ಷರ ಅಧಿಕಾರ ಸ್ವೀಕಾರ
The inauguration of rural and urban presidents was held in a grand manner
ರಾಣೆಬೆನ್ನೂರು 28 : ತಾಲೂಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನೂತನವಾಗಿ ನಿಯೋಜಿತರಾಗಿರುವ ರಾಣೆಬೆನ್ನೂರು ಗ್ರಾಮೀಣ ಹಾಗೂ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಶಿಕ್ಷಕರ ಹಾಗೂ ಪದವೀಧರ ಘಟಕದ ನಿಕಟಪೂರ್ವ ರಾಜ್ಯಾಧ್ಯಕ್ಷ ಡಾ. ಆರ್. ಎಂ. ಕುಬೇರ್ಪ ಅವರು ಭಾಗವಹಿಸಿ ನೂತನವಾಗಿ ಆಯ್ಕೆಯಾದ ಗ್ರಾಮೀಣ ಅಧ್ಯಕ್ಷ ಚಂದ್ರ್ಪ ಬೇಡರ, ನಗರ ಅಧ್ಯಕ್ಷ ಪುಟ್ಟಪ್ಪ ಮರಿಯಮ್ಮನವರ ಮತ್ತು ವಿವಿಧ ಗ್ರಾಮ ಘಟಕಗಳ ಅಧ್ಯಕ್ಷರುಗಳನ್ನು ಅಭಿನಂದಿಸಿ, ಶುಭಕೋರಿದರು. ಭಾರಿ ಸಮುದಾಯದೊಂದಿಗೆ ಅದ್ದೂರಿಯಾಗಿ ನಡೆದ ಪದಗ್ರಹಣ ಸಮಾರಂಭದಲ್ಲಿ ವಿಧಾನಸಭೆಯ ಮಾಜಿ ಸಭಾಪತಿ ಕೆ.ಬಿ. ಕೋಳಿವಾಡ, ಶಾಸಕ ಪ್ರಕಾಶ್ ಕೋಳಿವಾಡ, ಮಾಜಿ ಸಚಿವರಾದ, ಆರ್. ಶಂಕರ,ಜಿಲ್ಲಾ ಅಧ್ಯಕ್ಷ ಸಂಜಯ ಕುಮಾರ ನೀರಲಗಿ. ಜಿಲ್ಲಾ ಯೂತ್ ಕಾಂಗ್ರೆಸ್ ಅಧ್ಯಕ್ಷ ದರ್ಶನ್ ಕುಮಾರ ಲಮಾಣಿ,ಹಾವೇರಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಮಂಜನಗೌಡ ಪಾಟೀಲ್, ಮೋಹನ್ ಲಿಂಬಿಕಾಯಿ ಹಾಗೂ ಜಿಲ್ಲಾ ಪದವೀಧರ ಘಟಕದ ಅಧ್ಯಕ್ಷ ಶಂಕರ್ ಮೇಹರವಾಡೆ ಸೇರಿದಂತೆ ಜಿಲ್ಲೆಯ ಮತ್ತು ರಾಜ್ಯದ ಹಲವು ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಮಹಿಳಾ ಮುಖಂಡರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 