ದೇವಿ ಶಕ್ತಿ ಪ್ರಭಾವವು ಅಪಾರವಾದದ್ದು
ಗೋಕಾಕ 02: 'ದೇವಿಯನ್ನು ವಿಶ್ವದಾದ್ಯಂತ ಆರಾಧಿಸುತ್ತಿದ್ದು, ದೇವಿಯ ಶಕ್ತಿ, ಪ್ರಭಾವವು ಅಪಾರವಾಗಿದೆ' ಎಂದು ನಿಚ್ಚಣಕಿಯ ಪಂಚಾಕ್ಷರಿ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವ ನಿಮಿತ್ತವಾಗಿ ಏರ್ಪಡಿಸಿದ್ದ ಶ್ರೀದೇವಿ ಮಹಾತ್ಮೆ ಪುರಾಣ, ಪ್ರವಚನದಲ್ಲಿ ಮಾತನಾಡಿದರು.
ದೇಶದಲ್ಲಿ 18 ಶಕ್ತಿಪೀಠಗಳಿದ್ದು, ದಸರೆಯ ಹಬ್ಬವು ಭಾರತಕ್ಕೆ ಬಹುಮುಖ್ಯವಾದ ಉತ್ಸವ, ಆಚರಣೆಯಾಗಿದೆ. ಜಗತ್ತಿನ ವಿವಿಧ ದೇಶಗಳಲ್ಲಿಯೂ ಸಹ ದೇವಿಯನ್ನು ಬೇರೆ ಬೇರೆ ರೂಪಗಳಲ್ಲಿ ಆರಾಧಿಸುವರು ಎಂದರು.
ನವರಾತ್ರಿಯು ದೇವಿಯ ಪ್ರಸನ್ನತೆಯಲ್ಲಿರುವುದರಿಂದ ಭಕ್ತರ ಕೋರಿಕೆಗೆ ಕೃಪೆದೋರುವಳು ಎಂದು ಹೇಳಿದರು. ಶೂನ್ಯ ಸಿಂಹಾಸನಾಧೀಶ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರ್ಸ ಮಹಾಸನ್ನಿಧಿಯವರು ಆಶೀರ್ವದಿಸಿದರು.
ರೋಣದ ಪುಟ್ಟರಾಜ ಸಂಗೀತವು ಶ್ರೋತೃತಗಳ ಮನತಣಿಸಿತು. ವಿಜಯ ದೊಡ್ಡಣ್ಣವರ ತಬಲಾ ಸಾಥ್ ಗಮನಸೆಳೆಯಿತು. ನಾಡಿನ ವಿವಿಧೆಡೆಯಿಂದ ಭಕ್ತರು ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 