ದೇವಿ ಶಕ್ತಿ ಪ್ರಭಾವವು ಅಪಾರವಾದದ್ದು
ಗೋಕಾಕ 02: 'ದೇವಿಯನ್ನು ವಿಶ್ವದಾದ್ಯಂತ ಆರಾಧಿಸುತ್ತಿದ್ದು, ದೇವಿಯ ಶಕ್ತಿ, ಪ್ರಭಾವವು ಅಪಾರವಾಗಿದೆ' ಎಂದು ನಿಚ್ಚಣಕಿಯ ಪಂಚಾಕ್ಷರಿ ಸ್ವಾಮೀಜಿ ಹೇಳಿದರು.
ತಾಲ್ಲೂಕಿನ ಸುಕ್ಷೇತ್ರ ಸಾವಳಗಿಯ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವ ನಿಮಿತ್ತವಾಗಿ ಏರ್ಪಡಿಸಿದ್ದ ಶ್ರೀದೇವಿ ಮಹಾತ್ಮೆ ಪುರಾಣ, ಪ್ರವಚನದಲ್ಲಿ ಮಾತನಾಡಿದರು.
ದೇಶದಲ್ಲಿ 18 ಶಕ್ತಿಪೀಠಗಳಿದ್ದು, ದಸರೆಯ ಹಬ್ಬವು ಭಾರತಕ್ಕೆ ಬಹುಮುಖ್ಯವಾದ ಉತ್ಸವ, ಆಚರಣೆಯಾಗಿದೆ. ಜಗತ್ತಿನ ವಿವಿಧ ದೇಶಗಳಲ್ಲಿಯೂ ಸಹ ದೇವಿಯನ್ನು ಬೇರೆ ಬೇರೆ ರೂಪಗಳಲ್ಲಿ ಆರಾಧಿಸುವರು ಎಂದರು.
ನವರಾತ್ರಿಯು ದೇವಿಯ ಪ್ರಸನ್ನತೆಯಲ್ಲಿರುವುದರಿಂದ ಭಕ್ತರ ಕೋರಿಕೆಗೆ ಕೃಪೆದೋರುವಳು ಎಂದು ಹೇಳಿದರು. ಶೂನ್ಯ ಸಿಂಹಾಸನಾಧೀಶ ಶ್ರೀಮನ್ ಮಹಾರಾಜ ನಿರಂಜನ ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರ್ಸ ಮಹಾಸನ್ನಿಧಿಯವರು ಆಶೀರ್ವದಿಸಿದರು.
ರೋಣದ ಪುಟ್ಟರಾಜ ಸಂಗೀತವು ಶ್ರೋತೃತಗಳ ಮನತಣಿಸಿತು. ವಿಜಯ ದೊಡ್ಡಣ್ಣವರ ತಬಲಾ ಸಾಥ್ ಗಮನಸೆಳೆಯಿತು. ನಾಡಿನ ವಿವಿಧೆಡೆಯಿಂದ ಭಕ್ತರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 