ಕಾವ್ಯದ ಭಾಷೆ ಓದುಗರ ಮನ ಮುಟ್ಟುವಂತಿರಬೇಕು: ಡಾ ಹೊಸಮನಿ
The language of poetry should touch the heart of the reader: Dr Hosmani
ಕಾವ್ಯದ ಭಾಷೆ ಓದುಗರ ಮನ ಮುಟ್ಟುವಂತಿರಬೇಕು: ಡಾ ಹೊಸಮನಿ
ಹುಕ್ಕೇರಿ 01: ಕಾವ್ಯ ಪರಂಪರೆ ಓದುಗರಿಗೆ ಹೊಸತನವನ್ನು ನೀಡುತ್ತದೆ. ಅನಾದಿಕಾಲದಿಂದಲೂ ಜನರ ಸಂವಹನವೇ ಕಾವ್ಯವಾಗಿತ್ತು. ಕವಿತೆಯನ್ನು ಸಹೃದಯರಿಗೆ ಹೇಗೆ ತಲುಪಿಸಬೇಕೆಂಬ ಸಂಗತಿ ಕವಿಗೆ ತಿಳಿದಿರಬೇಕು. ಕೇವಲ ನಮ್ಮ ಕಾವ್ಯ, ಕವನಗಳಿಗೆ ಸೀಮಿತವಾಗಿರದೆ ಆಚರಣೆಯಲ್ಲಿ ಬರಬೇಕು. ಕನ್ನಡ ನಾಡು ನುಡಿಗೆ ನಾವೆಲ್ಲ ಶ್ರಮಿಸಬೇಕೆಂಬ ತಾಲೂಕಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಪ್ರಕಾಶ ಹೊಸಮನಿ ಅಭಿಪ್ರಾಯಪಟ್ಟರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಜಂಟಿಯಾಗಿ ಕರ್ನಾಟಕ ಸಂಭ್ರಮ ಅಂಗವಾಗಿ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂನ ಬಳಿ ಇರುವ ಶಕ್ತಿ ಸದನ ಮಹಿಳಾ ಪುನರ್ವಸತಿ ಕೇಂದ್ರದ ಸಭಾಂಗಣದಲ್ಲಿ ಆಯೋಜಿಸಿದ್ದ ಕವಿ ಗೋಷ್ಠಿ ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಎಸ್.ಎಂ.ಶಿರೂರ ಮಾತನಾಡುತ್ತಾ ಕವನ ರಚನೆ ಮತ್ತು ಅದನ್ನು ಪ್ರಸ್ತುತಪಡಿಸುವುದು ಕಲೆಯಾಗಿದೆ ಎಂದರು ಕವಿಗೋಷ್ಠಿ ಬಗ್ಗೆ ಹರ್ಷ ವ್ಯಕ್ತಪಡಿಸಿ ಎಲ್ಲರೂ ಓದಿದ ಕವನಗಳು ಬೇರೆ ಬೇರೆ ಬಗೆಯ ಅನುಭವವನ್ನು ನೀಡಿತು. ಸಮಾಜವನ್ನು ತಿದ್ದುವ ಶಕ್ತಿ ಸಾಹಿತ್ಯಕ್ಕಿದೆ ಆದರೆ ಇತ್ತೀಚಿನ ದಿನಗಳಲ್ಲಿ ಸಾಹಿತ್ಯ ಮಹತ್ವ ಕಳೆದುಕೊಳ್ಳುತ್ತಿದೆ ಎಂದರು.
ಮುಖ್ಯ ಅತಿಥಿಗಳಾಗಿ ಮುಖ್ಯಧ್ಯಾಪಕಿ ಬೊರಮ್ಮ ಅಂಗಡಿ, ಸುಭಾಷ್ ಕುಂಬಾರ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಜಯಶ್ರೀ ಮತ್ತಿಕೊಪ್ಪ ಉಪಸ್ಥಿತರಿದ್ದರು. 20ಕ್ಕೂ ಹೆಚ್ಚು ಕವಿಗಳು ಕವನವಾಚನ ಮಾಡಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಚಾರ್ಯ ಕಿರಣ ಚೌಗಲಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಚೇತನ ಕುಲಕರ್ಣಿಯವರು ನಿರೂಪಿಸಿ, ವಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 