ಮನುಷ್ಯ ಸತ್ತಮೇಲೆಯೂ ಆತನ ಹೆಸರಿರಬೇಕು: ಸಚ್ಚಿದಾನಂದ ಶ್ರೀ
ಲೋಕದರ್ಶನವರದಿ
ರಾಣೇಬೆನ್ನೂರು09: ಆಧುನೀಕತೆಯ ಇಂದಿನ ದಿನಮಾನಗಳಲ್ಲಿ ಸಾಮಾಜಿಕ ಪಿಡುಗು ಎಂದೆನಿಸಿರುವ ವರದಕ್ಷಿಣೆ ಪದ್ಧತಿ ಹಾಗೂ ವಿವಾಹ ವಿಚ್ಛೇದನಗಳು ಹೆಚ್ಚಾಗುತ್ತಿರುವುದು ದುದರ್ೈವದ ಸಂಗತಿಯಾಗಿದೆ ಎಂದು ದೈವಜ್ಞ ಬ್ರಾಹ್ಮಣ ಸಮಾಜದ ಕಕರ್ಿ ಮಠದ ಸಚ್ಚಿದಾನಂದ ಜ್ಞಾನೇಶ್ವರಿ ಮಹಾಸ್ವಾಮಿಗಳು ನುಡಿದರು.
ಸ್ಥಳೀಯ ಮೃತ್ಯುಂಜಯ ನಗರದಲ್ಲಿ ದೈವಜ್ಞ ಸಮಾಜದ ವತಿಯಿಂದ ನೂತನವಾಗಿ ನಿಮರ್ಿಸಿರುವ ದೈವಜ್ಞ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿದರು.
ಮನುಷ್ಯ ಸತ್ತ ಮೇಲೆಯೂ ಆತನ ಹೆಸರು ಜನಮಾನಸದಲ್ಲಿ ಜೀವಂತವಾಗಿರುವಂತಹ ಕೆಲಸಗಳನ್ನು ಮಾಡಬೇಕು. ಮನುಷ್ಯನಿಗೆ ವೈಯುಕ್ತಿಕ ಹಿತಾಸಕ್ತಿಗಿಂತ ಸಮಸ್ತ ಮನುಕುಲದ ಶ್ರೇಯಸ್ಸಿನ ಚಿಂತನೆಯಿರಬೇಕು ಎಂದರು.
ಸಂಕುಚಿತ ಮನೋಭಾವನೆಯಿಂದ ಕಷ್ಟ ಕಾರ್ಪಣ್ಯಗಳು ಹೆಚ್ಚಾಗುತ್ತವೆ. ಲೋಕದ ಸಮಸ್ತ ಜನರು ಸುಖವಾಗಿರಲಿ ಎಂಬ ಚಿಂತನೆಯಿರಬೇಕು.
ಋಣಾತ್ಮಕ ವಿಚಾರಗಳ ಬದಲಿಗೆ ಧನಾತ್ಮಕ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಜನರು ಸಂಘಟಿತರಾಗಿ ಇಂತಹ ಸಣ್ಣ ಊರಿನಲ್ಲಿಯೂ ಭವ್ಯವಾದ ಸಮುದಾಯ ಭವನ ನಿಮರ್ಿಸಿರುವುದು ಶ್ಲಾಘನೀಯ ಎಂದರು.
ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ದೊಡ್ಡ ಸಮಾಜದವರೇ ಇಂತಹ ಸಮುದಾಯದ ಬಗ್ಗೆ ತಲೆಕೆಡಿಕೊಂಡಿಲ್ಲ.
ಹೀಗಿರುವಾಗ ದೈವಜ್ಷ ಸಮಾಜ ಸಣ್ಣ ಸಮಾಜವಾಗಿದ್ದರೂ ಸಹಿತ ತಾಲೂಕಿನಲ್ಲಿ ಭವ್ಯವಾದ ಕಲ್ಯಾಣ ಮಂಟಪ ಕಟ್ಟಿರುವುದು ಹೆಮ್ಮೆಯ ವಿಷಯವಾಗಿದೆ.
ಸಾಧನೆ ಮಾಡಲು ಛಲ ಇರಬೇಕು ಎನ್ನುವುದು ತೋರಿಸಿ ಕೊಟ್ಟಿದ್ದಾರೆ ಎಂದರು.
ತಾಲೂಕು ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷ ವೆಂಕಟೇಶ ದೈವಜ್ಞ, ದತ್ತಾತ್ರೇಯ ಶೇಜವಾಡಕರ, ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ವಿನಯಾ ರಾಯ್ಕರ್, ನಗರಸಭಾ ಸದಸ್ಯರಾದ ಮಲ್ಲಿಕಾಜರ್ುನ ಅಂಗಡಿ, ಪಾಂಡುರಂಗ ಗಂಗಾವತಿ, ಚೋಳಪ್ಪ ಕಸವಾಳ, ಕಮಲಾಕರ ಶೇಜವಾಡಕರ, ಮಂಜುನಾಥ ಶೇಜವಾಡಕರ, ಪ್ರಕಾಶ ರೇವಣಕರ, ರಾಜು ರೇವಣಕರ, ಪದ್ಮಾವತಿ ದೈವಜ್ಞ, ವತ್ಸಲಾ ಶೇಜವಾಡಕರ, ಸಂತೋಷ ದೈವಜ್ಞ ಸೇರಿದಂತೆ ಮತ್ತಿತರರು ಗಣ್ಯರು, ಸಮಾಜದ ಮುಖಂಡರು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 