ಪಂದ್ಯ ಇನ್ನು ಮುಗಿದಿಲ್ಲ, ನಮಗೂ ಗೆಲ್ಲುವ ಚಾನ್ಸ್ ಇದೆ: ಆತ್ಮವಿಶ್ವಾಸದಲ್ಲಿ ರಹಾನೆ
ಲಾಡ್ಸರ್್ 11: ಮೊದಲ ದಿನ ನಿರಂತರ ಮಳೆ, ಎರಡನೇ ದಿನ ಮಳೆಯ ನಡುವೆ ಆಟವಾಡಿದ ಭಾರತ ತಂಡ ಕೇವಲ 107 ರನ್ಗಳಿಗೆ ಆಲೌಟ್ ಆಗಿದೆ.
ಒಂದುಕಡೆ ಮಳೆ, ಇನ್ನೊಂದು ಕಡೆ ಇಂಗ್ಲೆಂಡ್ ಬೌಲರ್ಗಳ ಬಿರುಸಿನ ದಾಳಿಗೆ ಕಂಗೆಟ್ಟ ಟೀಮ್ ಇಂಡಿಯಾದ ಯಾವೊಬ್ಬ ಆಟಗಾರನೂ ಕ್ರೀಸ್ನಲ್ಲಿ ಸ್ಥಿರವಾಗಿ ನಿಲ್ಲಲು ಸಾಧ್ಯವಾಗಲಿಲ್ಲ. ಪರಿಣಾಮ ಕೇವಲ 107 ರನ್ಗಳಿಗೆ ಸರ್ವಪತನ ಕಂಡಿತು.
ಆದರೆ ಪಂದ್ಯದ ಬಳಿಕ ಮಾತನಾಡಿದ ತಂಡದ ಉಪ ನಾಯಕ ಅಜಿಂಕ್ಯ ರಹಾನೆ, ಇಂತಹ ವಾತಾವರಣದಲ್ಲಿ ಯಾವುದೇ ತಂಡವಾದರೂ ಇದೇ ಪರಿಸ್ಥಿತಿ ಎದುರಿಸಬೇಕಾಗಿತ್ತು. ನಮ್ಮ ಆಟವೂ ಉತ್ತಮವಾಗಿರಲಿಲ್ಲ. ಆದರೆ ಪಂದ್ಯ ಇನ್ನು ಮುಗಿದಿಲ್ಲ. ಇಂಗ್ಲೆಂಡ್ ಬೌಲಿಂಗ್ ಉತ್ತಮವಾಗಿತ್ತು ಎಂದ ರಹಾನೆ, ಎರಡನೇ ಇನ್ನಿಂಗ್ಸ್ನಲ್ಲಿ ನಾವು ಉತ್ತಮವಾಗಿ ಬ್ಯಾಟಿಂಗ್ ನಡೆಸಿ ಸ್ಪಧರ್ಾತ್ಮಕ ಗುರಿ ನೀಡಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.
ಪಂದ್ಯ ಅರ್ಧ ಮಾತ್ರ ಮುಗಿದಿದ್ದು, ಇನ್ನು 3 ದಿನ ಆಟ ಬಾಕಿ ಇದೆ. ಈ ಪಂದ್ಯದಲ್ಲಿ ನಾವು ಸೋತಿದ್ದೇವೆ ಎಂದುಕೊಳ್ಳದೆ ಆಡಬೇಕಿದೆ. ಮೊದಲು ನಮಗೆ ನಂಬಿಕೆ ಮುಖ್ಯ. ಈ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎನ್ನುವುದಕ್ಕೆ ಇನ್ನು ಸಮಯವಿದೆ. ಪಂದ್ಯ ಮುಗಿದ ನಂತರ ಸರಣಿ 1-1 ರಲ್ಲಿ ಸಮವಾಗಬಹುದು ಎಂದು ಅಭಿಪ್ರಾಯಪಟ್ಟರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 