ಪಂದ್ಯ ಸ್ಥಳಾಂತರಿಸುವಂತೆ ಕೇಳಿಕೊಂಡಿದ್ದು ತಡವಾಯಿತು
ನವದೆಹಲಿ, ನ.4: ಇಲ್ಲಿನ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮೊದಲ ಟಿ-20 ಪಂದ್ಯಕ್ಕೆ ವಾಯುಮಾಲಿನ್ಯ ಕಾಟ ನೀಡಿದ್ದು, ಪಂದ್ಯವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬೇರೆ ಸ್ಥಳಕ್ಕೆ ವರ್ಗಾಯಿಸದೇ ಇರುವುದು ಬೇಸರ ತಂದಿದೆ ಎಂದು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್ ಅಧ್ಯಕ್ಷ ನಜ್ಮುಲಾ ಹಸನ್ ತಿಳಿಸಿದ್ದಾರೆ. ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಈ ಮೊದಲೇ ತಿಳಿಸಿದಂತೆ ಬದಲಾವಣೆಯ ಮನವಿ ತಡವಾಯಿತು ಎಂದು ತಿಳಿಸಿದ್ದರು. ಬಾಂಗ್ಲಾದೇಶದ ಆಟಗಾರರು ಅಭ್ಯಾಸದ ವೇಳೆ ಮಾಸ್ಕ್ ಧರಿಸಿದ್ದರು. ನಿಜ ಹೇಳಬೇಕಂದರೆ ಈ ಬಗ್ಗೆ ನಮಗೆ ತಿಳಿದಿರಲಿಲ್ಲ. ಇಲ್ಲಿನ ಪರಿಸ್ಥಿತಿ ಕೊನೆಯ ಕ್ಷಣದಲ್ಲಿ ಅರಿವಾಯಿತು. ಅಲ್ಲದೆ ದೆಹಲಿಯಲ್ಲಿನ ವಾತಾವರಣದ ಬಗ್ಗೆ ಅಂತರ್ಜಾಲದಲ್ಲಿ ನೋಡಿ ಗಾಭರಿ ಪಟ್ಟೆ ಎಂದು ನಜ್ಮುಲಾ ಹಸನ್ ಹೇಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ಇಳಿದಾಗ ಮಂಜು ಮುಸುಕಿದ ವಾತಾವರಣ ಕಾಣಿಸಿಕೊಂಡಿತು. ಆದರೆ ಇದು ಮಂಜಲ್ಲ ಎಂಬುದು ತಡವಾಗಿ ತಿಳಿಯಿತು. ಹೀಗಿರುವಾಗ ಹೇಗೆ ಆಡುವುದು ಎಂದು ಪ್ರಶ್ನಿಸಿದ್ದೆ. ಈ ವಿಚಾರವಾಗಿ ಆಟಗಾರರು ಹಾಗೂ ತರಬೇತು ದಾರರೊಂದಿಗೆ ಸಂಪರ್ಕದಲ್ಲಿದ್ದೆ ಎಂದಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 