ಗಾಂಧಿ ಕುಟುಂಬದ ಆನಂದ್ ಭವನಕ್ಕೆ ನೋಟಿಸ್ ಜಾರಿಗೊಳಿಸಿದ ಪುರಸಭೆ
ಪ್ರಯಾಗ್ ರಾಜ್, ನ 18 : ಸ್ವಾತಂತ್ರ್ಯಪೂರ್ವ ಚಳವಳಿಯಲ್ಲಿ ಕಾಂಗ್ರೆಸ್ ನ ಪ್ರಧಾನ ಕಾರ್ಯಾಲಯವಾಗಿದ್ದ ಆನಂದ್ ಭವನ್ ಗೆ ತೆರಿಗೆ ಪಾವತಿಸದ ಆರೋಪದ ಮೇಲೆ ಪ್ರಯಾಗ್ ರಾಜ್ ಪುರಸಭೆ ನೋಟಿಸ್ ಜಾರಿ ಮಾಡಿದೆ. ಆನಂದ್ ಭವನ, ಸ್ವರಾಜ್ ಭವನ ಮತ್ತು ಜವಹರ್ ತಾರಾಲಯದ ಮೂರು ಕಟ್ಟಡಗಳ ಒಟ್ಟು 4.33 ಕೋಟಿ ರೂ. ಗೃಹ ತೆರಿಗೆ ಪಾವತಿ ಬಾಕಿಯಿದೆ. ಈ ಎಲ್ಲಾ ಕಟ್ಟಡಗಳನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ಪಕ್ಷದ ಸದಸ್ಯರ ನೇತೃತ್ವದ ಜವಹರ್ ಲಾಲ್ ನೆಹರು ಸ್ಮಾರಕ ನಿಧಿಯಿಂದ ನಡೆಸಲಾಗುತ್ತಿದೆ. ಈ ಕಟ್ಟಡಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವುದರಿಂದ ತೆರಿಗೆ ಪಾವತಿಸಬೇಕು ಎಂದು ನೋಟಿಸ್ ತಿಳಿಸಿದೆ. ಮುಖ್ಯ ತೆರಿಗೆ ಅಧಿಕಾರಿ ಪಿ.ಕೆ.ಮಿಶ್ರಾ ಪ್ರಕಾರ, ಎರಡು ವಾರಗಳ ಹಿಂದೆಯೇ ನೋಟಿಸ್ ಜಾರಿಯಾಗಿದೆ. ಅದಕ್ಕೆ ಪ್ರತಿಕ್ರಿಯೆಯಾಗಿ ನಿಧಿಯ ಕಾರ್ಯದರ್ಶಿ ಎನ್. ಬಾಲಕೃಷ್ಣನ್ ಅವರು ಸರ್ವೆ ವರದಿ ಮತ್ತು ಬಾಕಿ ಹಣದ ಇತರ ಮಾಹಿತಿಗಳನ್ನು ಕೋರಿ ಪತ್ರ ಬರೆದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 