ಜಂತು ನಾಶಕ ಮಾತ್ರೆ ಸೇವನೆ ಅವಶ್ಯ: ರಾಘವೇಂದ್ರ
ಲೋಕದರ್ಶನವರದಿ
ರಾಣೇಬೆನ್ನೂರು11: ಜಂತುಹುಳು ನಿವಾರಣಾ ಔಷಧಿ ಸೇವಿಸುವುದರಿಂದ ಆರೋಗ್ಯ ಸುಧಾರಣೆ, ಅಪೌಷ್ಟಿಕತೆ ನಿವಾರಣೆ ಹಾಗೂ ಬೌಧ್ಧಿಕ ಬೆಳವಣಿಗೆಯಾಗಲಿದೆ. ಬರಿ ಗಣ್ಣಿಗೆ ಕಾಣಿಸದ ಜಂತುಹುಳುಗಳ ಮಕ್ಕಳ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಕಿರಿಯ ಆರೋಗ್ಯ ಸಹಾಯಕ ರಾಘವೇಂದ್ರ ಪಿ ಹೇಳಿದರು.
ತಾಲೂಕಿನ ಮಾಕನೂರು ಗ್ರಾಮದ ಮುರಾಜರ್ಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ರಾಷ್ಟ್ರೀಯ ಜಂತುಹುಳು ನಿವಾರಣೆ ದಿನ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 1 ರಿಂದ 19 ವರ್ಷದ ಒಳಗಿನ ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆಯನ್ನು ಎಲ್ಲಾ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ನೀಡಲಾಗುತ್ತಿದ್ದು, ದಾಖಲಾಗದ ಮತ್ತು ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಜಂತುಹುಳು ನಾಶಕ ಮಾತ್ರೆಗಳನ್ನು ಫೆ.17 ರಂದು ನೀಡಲಾಗುತ್ತಿದೆ ಎಂದರು. ಪ್ರಾಂಶುಪಾಲ ವಾಗೀಶ ಉದಾಸಿಮಠ, ವೀರಣ್ಣ ನೂರಂದೂರು, ಎಂ.ಐ. ಕೊಠಡೂರು, ತನ್ಮಯ, ಲಲಿತಶ್ರೀ ಜಿ.ಬಿ, ಪ್ರೇಮಾ ಆರ್.ಬಿ, ಪ್ರತಿಭಾ ಹಡಗಲಿ, ಸಂಗೀತಾ ದೀಕ್ಷಿತ್, ಬಸವರಾಜ್ ಲಮಾಣಿ, ರೇಣುಕಾ ಆರೇರ, ಮಂಜುನಾಥ ಸೇರಿದಂತೆ ಮತ್ತಿತರರು ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 