ಮುಂದಿನ ಸಚಿವ ಸಂಪುಟ ವಿಸ್ತರಣೆ ಮರೀಚಿಕೆ : ಸತೀಶ್ ಜಾರಕಿಹೊಳಿ
ಬೆಳಗಾವಿ, ಸೆ 8 ಮುಂದಿನ ಸಚಿವ ಸಂಪುಟ ವಿಸ್ತರಣೆ ಮರೀಚಿಕೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ನಾಯಕರು ಬಿಜೆಪಿಯ ಶಾಸಕರಿಗೂ ಸಚಿವ ಸ್ಥಾನ ಕೊಡುತ್ತಿಲ್ಲ, ಇನ್ನೊಂದು ಕಡೆ ಅನರ್ಹ ಶಾಸಕರಿಗೂ ತಕ್ಷಣವೇ ಮಂತ್ರಿ ಭಾಗ್ಯ ಸಿಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ, ಹೀಗಾಗಿ ಮುಂದಿನ ಸಚಿವ ಸಂಪುಟ ವಿಸ್ತರಣೆ ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ ಎಂದರು. ಪರಿಸ್ಥಿತಿ ಹೀಗಿರುವಾಗ ಹಗಲು ಕಂಡ ಬಾವಿಗೆ ರಾತ್ರಿ ಹೋಗಿ ಯಾರೂ ಬೀಳುವುದಿಲ್ಲ, ಬಿಜೆಪಿ ನಾಯಕರ ಮನಸ್ಸಿನಲ್ಲಿ ಏನಿದೆ ಎಂಬುದು ಎಲ್ಲರಿಗೂ ಗೊತ್ತಾಗಿದೆ. ಇನ್ನು ಮುಂದೆ ಯಾವುದೇ ಜೆಡಿಎಸ್ ಶಾಸಕರಾಗಲೀ, ಕಾಂಗ್ರೆಸ್ ಶಾಸಕರಾಗಲೀ ಬಿಜೆಪಿ ಕಡೆ ಹೋಗುವುದಿಲ್ಲ ಎಂದು ಅವರು ಹೇಳಿದರು. ಈಗಾಗಲೇ ಬಿಜೆಪಿ ಕಡೆ ಹೋಗಲು ಮಾನಸಿಕ ಸಿದ್ಧರಾಗಿರುವ ಶಾಸಕರಿಗೂ, ಅನರ್ಹ ಶಾಸಕರಿಗೂ ಮುಂದಿನ ಭವಿಷ್ಯದ ಚಿಂತೆ ಬಹಳವಾಗಿ ಕಾಡುತ್ತಿದೆ. ಹೀಗಾಗಿ ಸರ್ಕಾರದ ಭವಿಷ್ಯದ ಮೇಲೆ ಒಂದು ರೀತಿ ಆತಂಕದ ಕಾರ್ಮೊಡ ಕವಿದಿದೆ ಎಂದು ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಜಾರಕಿಹೊಳಿ ಸಹೋದರರ ನಡುವಿನ ಕಲಹಕ್ಕೆ ತಾವು ಕಿಚ್ಚು ಹಚ್ಚಿಲ್ಲ ಎಂದ ಅವರು, ತಾವು ಒಳಿತಿಗಾಗಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ಕೇವಲ ದೇವಾಲಯಗಳಿಗೆ ಭೇಟಿ ನೀಡದರೆ ಸಾಲದು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 