ಮುಂದಿನ ಸಚಿವ ಸಂಪುಟ ವಿಸ್ತರಣೆ ಮರೀಚಿಕೆ : ಸತೀಶ್ ಜಾರಕಿಹೊಳಿ
ಬೆಳಗಾವಿ, ಸೆ 8 ಮುಂದಿನ ಸಚಿವ ಸಂಪುಟ ವಿಸ್ತರಣೆ ಮರೀಚಿಕೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ನಾಯಕರು ಬಿಜೆಪಿಯ ಶಾಸಕರಿಗೂ ಸಚಿವ ಸ್ಥಾನ ಕೊಡುತ್ತಿಲ್ಲ, ಇನ್ನೊಂದು ಕಡೆ ಅನರ್ಹ ಶಾಸಕರಿಗೂ ತಕ್ಷಣವೇ ಮಂತ್ರಿ ಭಾಗ್ಯ ಸಿಗುವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ, ಹೀಗಾಗಿ ಮುಂದಿನ ಸಚಿವ ಸಂಪುಟ ವಿಸ್ತರಣೆ ಯಕ್ಷಪ್ರಶ್ನೆಯಾಗಿ ಕಾಡುತ್ತಿದೆ ಎಂದರು. ಪರಿಸ್ಥಿತಿ ಹೀಗಿರುವಾಗ ಹಗಲು ಕಂಡ ಬಾವಿಗೆ ರಾತ್ರಿ ಹೋಗಿ ಯಾರೂ ಬೀಳುವುದಿಲ್ಲ, ಬಿಜೆಪಿ ನಾಯಕರ ಮನಸ್ಸಿನಲ್ಲಿ ಏನಿದೆ ಎಂಬುದು ಎಲ್ಲರಿಗೂ ಗೊತ್ತಾಗಿದೆ. ಇನ್ನು ಮುಂದೆ ಯಾವುದೇ ಜೆಡಿಎಸ್ ಶಾಸಕರಾಗಲೀ, ಕಾಂಗ್ರೆಸ್ ಶಾಸಕರಾಗಲೀ ಬಿಜೆಪಿ ಕಡೆ ಹೋಗುವುದಿಲ್ಲ ಎಂದು ಅವರು ಹೇಳಿದರು. ಈಗಾಗಲೇ ಬಿಜೆಪಿ ಕಡೆ ಹೋಗಲು ಮಾನಸಿಕ ಸಿದ್ಧರಾಗಿರುವ ಶಾಸಕರಿಗೂ, ಅನರ್ಹ ಶಾಸಕರಿಗೂ ಮುಂದಿನ ಭವಿಷ್ಯದ ಚಿಂತೆ ಬಹಳವಾಗಿ ಕಾಡುತ್ತಿದೆ. ಹೀಗಾಗಿ ಸರ್ಕಾರದ ಭವಿಷ್ಯದ ಮೇಲೆ ಒಂದು ರೀತಿ ಆತಂಕದ ಕಾರ್ಮೊಡ ಕವಿದಿದೆ ಎಂದು ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಜಾರಕಿಹೊಳಿ ಸಹೋದರರ ನಡುವಿನ ಕಲಹಕ್ಕೆ ತಾವು ಕಿಚ್ಚು ಹಚ್ಚಿಲ್ಲ ಎಂದ ಅವರು, ತಾವು ಒಳಿತಿಗಾಗಿ ಹೋರಾಟ ಮಾಡುವುದಾಗಿ ತಿಳಿಸಿದ್ದಾರೆ. ಕೇವಲ ದೇವಾಲಯಗಳಿಗೆ ಭೇಟಿ ನೀಡದರೆ ಸಾಲದು ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಅವರು ಕಿವಿಮಾತು ಹೇಳಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 