ಸುಪ್ರೀಂನ ಮುಂದಿನ ಮುಖ್ಯ ನ್ಯಾಯಮೂತರ್ಿ ಹುದ್ದೆ ರಂಜನ್ ಗೋಗೋಯ್ ಹೆಸರು ಕೇಂದ್ರಕ್ಕೆ ಶಿಫಾರಸು
ನವದೆಹಲಿ 01: ಸುಪ್ರೀಂಕೋಟರ್್ನ ಮುಂದಿನ ಮುಖ್ಯ ನ್ಯಾಯಮೂತರ್ಿಯಾಗಿ ಸುಪ್ರೀಂಕೋಟರ್್ ನ ಹಿರಿಯ ಜಡ್ಜ್ ರಂಜನ್ ಗೋಗೋಯ್ ಅವರ ಹೆಸರನ್ನು ಕೇಂದ್ರ ಸಕರ್ಾರಕ್ಕೆ ಹಾಲಿ ಸಿಜೆಐ ದೀಪಕ್ ಮಿಶ್ರಾ ಅವರು ಶಿಫಾರಸು ಮಾಡಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ಅವರು ಅಕ್ಟೋಬರ್ 2ರಂದು ಸೇವೆಯಿಂದ ನಿವೃತ್ತಿಯಾಗಲಿದ್ದು, ನಿಯಮದಂತೆ ತಮ್ಮ ನಿವೃತ್ತಿಗೂ ಮುನ್ನ ಮುಂದಿನ ಸಿಜೆಐ ಯಾರಾಗಬೇಕು ಎಂಬ ಹೆಸರನ್ನು ಕೇಂದ್ರ ಸಕರ್ಾರಕ್ಕೆ ಶಿಫಾರಸು ಮಾಡಬೇಕು.
ಮೆಮೊರಾಂಡಂ ಪ್ರಕ್ರಿಯೆ ಪ್ರಕಾರ ಕಳೆದ ತಿಂಗಳು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು, ದೇಶದ ಮುಖ್ಯನ್ಯಾಯಮೂತರ್ಿ ಮಿಶ್ರಾ ಅವರಿಗೆ ಪತ್ರ ಬರೆದು ನಿಮ್ಮ ಮುಂದಿನ ಸಿಜೆಐ ಯಾರು ಎಂಬ ಹೆಸರನ್ನು ಶಿಫಾರಸು ಮಾಡಿ ಎಂದು ಮನವಿ ಮಾಡಿಕೊಂಡಿದ್ದರು ಎಂದು ವರದಿ ತಿಳಿಸಿದೆ.
ಅಕ್ಟೋಬರ್ 3ರಂದು ಗೋಗೋಯ್ ಅವರು ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಜಸ್ಟೀಸ್ ಗೋಗೋಯ್ ಅವರು 1954ರಂದು ಜನಿಸಿದ್ದರು. ಕಾನೂನು ಶಿಕ್ಷಣ ಪದವಿ ಪಡೆದ ಬಳಿಕ 1978ರಲ್ಲಿ ಬಾರ್ ಅಸೋಸಿಯೇಶನ್ ಗೆ ಸೇರ್ಪಡೆಗೊಂಡಿದ್ದರು. 2001ರಲ್ಲಿ ಗೋಗೋಯ್ ಅವರನ್ನು ಗುವಾಹಟಿ ಹೈಕೋಟರ್್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿತ್ತು. ತದನಂತರ 2011ರಲ್ಲಿ ಗೋಗೋಯ್ ಅವರು ಪಂಜಾಬ್, ಹಯರ್ಾಣ ಹೈಕೋಟರ್್ ನ ಮುಖ್ಯ ನ್ಯಾಯಮೂತರ್ಿಯಾಗಿ ಸೇವೆ ಸಲ್ಲಿಸಿದ್ದರು.
ಕಳೆದ ಜನವರಿ ತಿಂಗಳಿನಲ್ಲಿ ಗೋಗೋಯ್ ಸೇರಿದಂತೆ ನಾಲ್ವರು ಹಿರಿಯ ನ್ಯಾಯಾಧೀಶರು ನವದೆಹಲಿಯಲ್ಲಿ ದಿಢೀರ್ ಪತ್ರಿಕಾಗೋಷ್ಠಿ ಕರೆದು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂದು ಆರೋಪಿಸಿದ್ದರು. ಈ ಹೇಳಿಕೆ ದೇಶಾದ್ಯಂತ ದೊಡ್ಡ ಮಟ್ಟದ ಚಚರ್ೆಗೆ ಗ್ರಾಸವಾಗಿತ್ತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 