ಸುಪ್ರೀಂನ ಮುಂದಿನ ಮುಖ್ಯ ನ್ಯಾಯಮೂತರ್ಿ ಹುದ್ದೆ ರಂಜನ್ ಗೋಗೋಯ್ ಹೆಸರು ಕೇಂದ್ರಕ್ಕೆ ಶಿಫಾರಸು
ನವದೆಹಲಿ 01: ಸುಪ್ರೀಂಕೋಟರ್್ನ ಮುಂದಿನ ಮುಖ್ಯ ನ್ಯಾಯಮೂತರ್ಿಯಾಗಿ ಸುಪ್ರೀಂಕೋಟರ್್ ನ ಹಿರಿಯ ಜಡ್ಜ್ ರಂಜನ್ ಗೋಗೋಯ್ ಅವರ ಹೆಸರನ್ನು ಕೇಂದ್ರ ಸಕರ್ಾರಕ್ಕೆ ಹಾಲಿ ಸಿಜೆಐ ದೀಪಕ್ ಮಿಶ್ರಾ ಅವರು ಶಿಫಾರಸು ಮಾಡಿದ್ದಾರೆ.
ಹಾಲಿ ಮುಖ್ಯ ನ್ಯಾಯಮೂತರ್ಿ ದೀಪಕ್ ಮಿಶ್ರಾ ಅವರು ಅಕ್ಟೋಬರ್ 2ರಂದು ಸೇವೆಯಿಂದ ನಿವೃತ್ತಿಯಾಗಲಿದ್ದು, ನಿಯಮದಂತೆ ತಮ್ಮ ನಿವೃತ್ತಿಗೂ ಮುನ್ನ ಮುಂದಿನ ಸಿಜೆಐ ಯಾರಾಗಬೇಕು ಎಂಬ ಹೆಸರನ್ನು ಕೇಂದ್ರ ಸಕರ್ಾರಕ್ಕೆ ಶಿಫಾರಸು ಮಾಡಬೇಕು.
ಮೆಮೊರಾಂಡಂ ಪ್ರಕ್ರಿಯೆ ಪ್ರಕಾರ ಕಳೆದ ತಿಂಗಳು ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರು, ದೇಶದ ಮುಖ್ಯನ್ಯಾಯಮೂತರ್ಿ ಮಿಶ್ರಾ ಅವರಿಗೆ ಪತ್ರ ಬರೆದು ನಿಮ್ಮ ಮುಂದಿನ ಸಿಜೆಐ ಯಾರು ಎಂಬ ಹೆಸರನ್ನು ಶಿಫಾರಸು ಮಾಡಿ ಎಂದು ಮನವಿ ಮಾಡಿಕೊಂಡಿದ್ದರು ಎಂದು ವರದಿ ತಿಳಿಸಿದೆ.
ಅಕ್ಟೋಬರ್ 3ರಂದು ಗೋಗೋಯ್ ಅವರು ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. ಜಸ್ಟೀಸ್ ಗೋಗೋಯ್ ಅವರು 1954ರಂದು ಜನಿಸಿದ್ದರು. ಕಾನೂನು ಶಿಕ್ಷಣ ಪದವಿ ಪಡೆದ ಬಳಿಕ 1978ರಲ್ಲಿ ಬಾರ್ ಅಸೋಸಿಯೇಶನ್ ಗೆ ಸೇರ್ಪಡೆಗೊಂಡಿದ್ದರು. 2001ರಲ್ಲಿ ಗೋಗೋಯ್ ಅವರನ್ನು ಗುವಾಹಟಿ ಹೈಕೋಟರ್್ ನ್ಯಾಯಾಧೀಶರನ್ನಾಗಿ ನೇಮಕ ಮಾಡಲಾಗಿತ್ತು. ತದನಂತರ 2011ರಲ್ಲಿ ಗೋಗೋಯ್ ಅವರು ಪಂಜಾಬ್, ಹಯರ್ಾಣ ಹೈಕೋಟರ್್ ನ ಮುಖ್ಯ ನ್ಯಾಯಮೂತರ್ಿಯಾಗಿ ಸೇವೆ ಸಲ್ಲಿಸಿದ್ದರು.
ಕಳೆದ ಜನವರಿ ತಿಂಗಳಿನಲ್ಲಿ ಗೋಗೋಯ್ ಸೇರಿದಂತೆ ನಾಲ್ವರು ಹಿರಿಯ ನ್ಯಾಯಾಧೀಶರು ನವದೆಹಲಿಯಲ್ಲಿ ದಿಢೀರ್ ಪತ್ರಿಕಾಗೋಷ್ಠಿ ಕರೆದು, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂದು ಆರೋಪಿಸಿದ್ದರು. ಈ ಹೇಳಿಕೆ ದೇಶಾದ್ಯಂತ ದೊಡ್ಡ ಮಟ್ಟದ ಚಚರ್ೆಗೆ ಗ್ರಾಸವಾಗಿತ್ತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 