ರಾಜ್ಯದಲ್ಲಿ ಕೊರೊನವೈರಸ್ನ ದೃಢಪಟ್ಟ ಪ್ರಕರಣಗಳ ಸಂಖ್ಯೆ 247 ಕ್ಕೆ ಏರಿಕೆ
ಬೆಂಗಳೂರು,
ಏಪ್ರಿಲ್ 13, ಹೊಸದಾಗಿ 15 ಕೊವಿದ್-19 ಪ್ರಕರಣಗಳು
ವರದಿಯಾಗುವುದರೊಂದಿಗೆ ರಾಜ್ಯದಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ ಸೋಮವಾರ ಇಲ್ಲಿ 247
ಕ್ಕೆ ಏರಿದೆ.ಅಧಿಕೃತ ಮೂಲಗಳ ಪ್ರಕಾರ, ಧಾರವಾಡದ ನಾಲ್ಕು ಪ್ರಕರಣಗಳನ್ನು
ಹೊರತುಪಡಿಸಿ, ಮಂಡ್ಯ ಜಿಲ್ಲೆಯ ಒಂದೇ ಕುಟುಂಬದಲ್ಲಿ ಮೂರು ಪ್ರಕರಣಗಳು, ಬೆಳಗಾವಿಯಲ್ಲಿ
ಮೂರು, ಬೀದರ್ ನಲ್ಲಿ 2 ಹಾಗೂ ಬಾಗಲಕೋಟೆ, ಬೆಂಗಳೂರು ನಗರ ಮತ್ತು ಗ್ರಾಮೀಣ
ಜಿಲ್ಲೆಯಿಂದ ತಲಾ ಒಂದು ಪ್ರಕರಣಗಳು ಹೊಸದಾಗಿ ವರದಿಯಾಗಿವೆ.15 ಹೊಸ ಪ್ರಕರಣಗಳಲ್ಲಿ
ಬೀದರ್, ಮಂಡ್ಯ ಮತ್ತು ಧಾರವಾಡ ಜಿಲ್ಲೆಗಳ ಐದು ಮಹಿಳಾ ರೋಗಿಗಳು ಸೇರಿದ್ದಾರೆ. ಸೋಂಕಿತ
ಎಲ್ಲ ರೋಗಿಗಳನ್ನು ನಿಗದಿಪಡಿಸಿದ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು, ಅವರ ಆರೋಗ್ಯ
ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.ರಾಜ್ಯದಲ್ಲಿ ಮಾರಕ ಸೋಂಕಿನಿಂದ ಆರು ಮಂದಿ ಬಲಿಯಾಗಿದ್ದರೆ, ಇತರ 59 ರೋಗಿಗಳು ಇದುವರೆಗೆ ಸಂಪೂರ್ಣ ಗುಣಮುಖರಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 