ರಾಜ್ಯದಲ್ಲಿ ಕೊರೊನವೈರಸ್ನ ದೃಢಪಟ್ಟ ಪ್ರಕರಣಗಳ ಸಂಖ್ಯೆ 247 ಕ್ಕೆ ಏರಿಕೆ
ಬೆಂಗಳೂರು,
ಏಪ್ರಿಲ್ 13, ಹೊಸದಾಗಿ 15 ಕೊವಿದ್-19 ಪ್ರಕರಣಗಳು
ವರದಿಯಾಗುವುದರೊಂದಿಗೆ ರಾಜ್ಯದಲ್ಲಿ ದೃಢಪಟ್ಟ ಪ್ರಕರಣಗಳ ಸಂಖ್ಯೆ ಸೋಮವಾರ ಇಲ್ಲಿ 247
ಕ್ಕೆ ಏರಿದೆ.ಅಧಿಕೃತ ಮೂಲಗಳ ಪ್ರಕಾರ, ಧಾರವಾಡದ ನಾಲ್ಕು ಪ್ರಕರಣಗಳನ್ನು
ಹೊರತುಪಡಿಸಿ, ಮಂಡ್ಯ ಜಿಲ್ಲೆಯ ಒಂದೇ ಕುಟುಂಬದಲ್ಲಿ ಮೂರು ಪ್ರಕರಣಗಳು, ಬೆಳಗಾವಿಯಲ್ಲಿ
ಮೂರು, ಬೀದರ್ ನಲ್ಲಿ 2 ಹಾಗೂ ಬಾಗಲಕೋಟೆ, ಬೆಂಗಳೂರು ನಗರ ಮತ್ತು ಗ್ರಾಮೀಣ
ಜಿಲ್ಲೆಯಿಂದ ತಲಾ ಒಂದು ಪ್ರಕರಣಗಳು ಹೊಸದಾಗಿ ವರದಿಯಾಗಿವೆ.15 ಹೊಸ ಪ್ರಕರಣಗಳಲ್ಲಿ
ಬೀದರ್, ಮಂಡ್ಯ ಮತ್ತು ಧಾರವಾಡ ಜಿಲ್ಲೆಗಳ ಐದು ಮಹಿಳಾ ರೋಗಿಗಳು ಸೇರಿದ್ದಾರೆ. ಸೋಂಕಿತ
ಎಲ್ಲ ರೋಗಿಗಳನ್ನು ನಿಗದಿಪಡಿಸಿದ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದ್ದು, ಅವರ ಆರೋಗ್ಯ
ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.ರಾಜ್ಯದಲ್ಲಿ ಮಾರಕ ಸೋಂಕಿನಿಂದ ಆರು ಮಂದಿ ಬಲಿಯಾಗಿದ್ದರೆ, ಇತರ 59 ರೋಗಿಗಳು ಇದುವರೆಗೆ ಸಂಪೂರ್ಣ ಗುಣಮುಖರಾಗಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 