ತಂಡವನ್ನು ಬಲಪಡಿಸುವುದೇ ಏಕೈಕ ಗುರಿ: ವಿರಾಟ್
ಪುಣೆ, ಅ.13: ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ತದಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಇನ್ನಿಂಗ್ಸ್ ಹಾಗೂ 137 ರನ್ ಜಯ ಸಾಧಿಸಿದೆ. ಈ ಬಗ್ಗೆ ಮಾತನಾಡಿರುವ ವಿರಾಟ್ ಕೊಹ್ಲಿ ತಂಡವನ್ನು ಬಲ ಪಡಿಸುವುದೇ ಏಕೈಕ ಗುರಿಯಾಗಿದೆ ಎಂದು ತಿಳಿಸಿದ್ದಾರೆ.
ಪಂದ್ಯದ ಬಳಿಕ ಮಾತನಾಡಿದ ವಿರಾಟ್, "ನಾಯಕನಾಗಿ ತಂಡವನ್ನು ಮುನ್ನಡೆಸುವುದ ದೊಡ್ಡ ಜವಾಬ್ದಾರಿ. ತಂಡದ ಪರ ದೊಡ್ಡ ಸ್ಕೋರ್ ಮಾಡುವುದು ನನ್ನ ಗುರಿ ಎಂದಿದ್ದಾರೆ.
ನಾನು ಅಜಿಂಕ್ಯ ರಹಾನೆ ಅವರೊಂದಿಗೆ ಬ್ಯಾಟಿಂಗ್ ಆಡುವುದನ್ನು ಆನಂದಿಸುತ್ತೇನೆ. ರಹಾನೆ ಅವರ ಮನಸ್ಥಿತಿ ಅತ್ಯಂತ ಸಕಾರಾತ್ಮಕವಾಗಿದೆ. ನಾವು ವಿಕೆಟ್ಗಳ ನಡುವೆ ಸಾಕಷ್ಟು ಚೆನ್ನಾಗಿ ಓಡುತ್ತೇವೆ ಎಂದು ಹೇಳಿದ್ದಾರೆ.
ವೃದ್ಧಿಮಾನ್ ಸಹಾ ಅವರು ವಿಕೆಟ್ನ ಹಿಂದೆ ಉತ್ತಮ ಕೆಲಸ ಮಾಡಿದ್ದಾರೆ. ಮೊದಲ ಟೆಸ್ಟ್ನಲ್ಲಿ ಸಹಾ ಸ್ವಲ್ಪ ಹಿನ್ನಡೆ ಅನುಭವಿಸಿದಂತೆ ಕಂಡು ಬಂದಿತು. ರವಿಚಂದ್ರನ್ ಅಶ್ವಿನ್ ಅದ್ಭುತ ಬೌಲಿಂಗ್ ಮಾಡಿದರು. ತಂಡದ ಜಯದಲ್ಲಿ ಆಟಗಾರರು ಶ್ರಮಿಸುತ್ತಿದ್ದಾರೆ. ಟೆಸ್ಟ್ ಸರಣಿಯನ್ನು 3-0ಯಿಂದ ಗೆಲ್ಲುವುದೇ ನಮ್ಮ ಗುರಿ ಎಂದು ತಿಳಿಸಿದ್ದಾರೆ.
ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಭಾರತ ಸಾಧಿಸಿದ ಸತತ ನಾಲ್ಕನೇ ಜಯ ಇದಾಗಿದೆ. ಈ ಗೆಲುವಿನಿಂದ ಭಾರತ 40 ಅಂಕಗಳನ್ನು ಪಡೆದಿದೆ ಮತ್ತು ಈಗ 200 ಅಂಕಗಳನ್ನು ಹೊಂದಿದೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 