ಮುತ್ತು ಉತ್ಪತ್ತಿ ಆಯಿತು ಶಿಶುವಿಗೆ ಹಾಲೇರಿಯಿತಲೇ ಪರಾಕ್ : ಗೊರವಯ್ಯ ನೀಲಪ್ಪ
The pearl was produced, the baby was breastfed and the strength was there: Goravayya Nilappa
ಲೋಕದರ್ಶನ ವರದಿ
ಶಿಗ್ಗಾವಿ 27: ಮುತ್ತು ಉತ್ಪತ್ತಿ ಆಯಿತು ಶಿಶುವಿಗೆ ಹಾಲೇರಿಯಿತಲೇ ಪರಾಕ ಇದು ತಾಲೂಕಿನ ಶ್ಯಾಡಂಬಿ ಗ್ರಾಮದಲ್ಲಿ ಮೈಲಾರಲಿಂಗೇಶ್ವರ್ ಜಾತ್ರೆಯಲ್ಲಿ ಗ್ರಾಮದ ಗೊರವಯ್ಯ ನೀಲಪ್ಪ ಮಾಕಪ್ಪನವರ ನುಡಿದ ಕಾರ್ಣಿಕ ನುಡಿ. ಇದರ ಅರ್ಥ ಈ ವರ್ಷ ಮಳೆ ಬೆಳೆ ಚನ್ನಾಗಿ ಆಗಿ ಎಲ್ಲರಿಗೂ ಒಳ್ಳೆಯದಾಗುವದು ಎಂಬುದು ಕಾರ್ಣಿಕದ ತಾತ್ಪರ್ಯ ಎಂದು ನೆರೆದ ಭಕ್ತ ಸಮೂಹ ವಿಮರ್ಶೆ ಮಾಡಿದರು. ನಂತರ ಮೈಲಾರಲಿಂಗೇಶ್ವರ ದೇವಸ್ಥಾನದ ಎದುರಿಗೆ ಗ್ರಾಮದ ಗೊರವಯ್ಯರಾದ ಮಾಲತೇಶ ಓಲೇಕಾರ, ಮಂಜುನಾಥ ಭೀಮನವರ, ದೇವೇಂದ್ರ್ಪ ಕಾಳಿ, ಅಣ್ಣಯ್ಯ ಪೂಜಾರ,ಶಿವುಕುಮಾರ ಸುಣಗಾರ, ನಿಂಗಪ್ಪ ಕಾಳಿ ಅವರು ಕಬ್ಬಿಣದ ಸರಪಳಿಗಳನ್ನು ಹರೆಯುದರ ಮೂಲಕ ಸರಪಳಿ ಪವಾಡ ನಡೆಸಿದರು. ನಂತರ ಮಹಾಪ್ರಸಾದ ಜರುಗಿತು. ಈ ಸಂದರ್ಭದಲ್ಲಿ ಶ್ರೀ ಮೈಲಾರಲಿಂಗೇಶ್ವರ ಸೇವಾ ಸಮಿತಿ ಅಧ್ಯಕ್ಷ ಧರ್ಮಣ್ಣ ಕಿವುಡನವರ, ಶಿವಪ್ಪ ಸಂಜೀವಣ್ಣವರ, ಹೇಮಂತ ಮೋದಿ, ಪ್ರತೀಕ ಮೋದಿ, ಶರೀಫ ಮಾಕಪ್ಪನವರ, ರುದ್ರಗೌಡ ಪಾಟೀಲ,ಮಲ್ಲಿಕಾರ್ಜುನ ಅಗಸರ, ರುದ್ರ್ಪ ಕಾಳಿ,ಮಂಜುನಾಥ ಪೂಜಾರ, ಮಾಲತೇಶ ಕುಲಕರ್ಣಿ, ಶಿವುಪುತ್ರಯ್ಯ ಪೂಜಾರ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮದ ಭಕ್ತಾದಿಗಳು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 