ತಿದ್ದುಪಡಿ ಮಸೂದೆ ಅಂಗೀಕಾರದಿಂದ ಅಸ್ಸಾಂ ಜನತೆ ಆತಂಕ ಪಡಬೇಕಿಲ್ಲ-ಪ್ರಧಾನಿ
ನವದೆಹಲಿ,12 ಪೌರತ್ವ ತಿದ್ದುಪಡಿ
ಮಸೂದೆಗೆ ಸಂಸತ್ ಅಂಗೀಕರಿಸಿದ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ನಡುವೆಯೇ ಪ್ರಧಾನಿ ನರೇಂದ್ರಮೋದಿ
ಹೇಳಿಕೆ ನೀಡಿ ಮಸೂದೆ ಅಂಗೀಕಾರದಿಂದ ಅಸ್ಸಾಂ ಜನತೆ ಯಾವುದೇ ಆತಂಕ ಪಡಬೇಕಿಲ್ಲ ಎಂದು ಹೇಳಿದ್ದಾರೆ.
‘ಅಸ್ಸಾಂ ಜನರ ಸಾಂಸ್ಕøತಿಕ, ರಾಜಕೀಯ, ಭಾಷೆ ಮತ್ತು
ಭೂ ಹಕ್ಕುಗಳನ್ನು ಸಾಂವಿಧಾನಿಕವಾಗಿ ಸಂರಕ್ಷಿಸಲು ಕೇಂದ್ರ ಸರ್ಕಾರ ಮತ್ತು ತಾವು ಸಂಪೂರ್ಣ ಬದ್ಧರಾಗಿದ್ದೇವೆ.
ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರದಿಂದ ಯಾವುದೇ ಆತಂಕ ಪಡಬೇಕಿಲ್ಲ ಎಂಬ ಭರವಸೆಯನ್ನು ಅಸ್ಸಾಂನ
ಸಹೋದರರು ಹಾಗೂ ಸಹೋದರಿಯರಿಗೆ ನೀಡುತ್ತಿದ್ದೇನೆ.’ ಎಂದು ಪ್ರಧಾನಿ ನರೇಂದ್ರಮೋದಿ ಸರಣಿ ಟ್ವೀಟ್ಗಳಲ್ಲಿ
ಹೇಳಿದ್ದಾರೆ. ‘ನಿಮ್ಮ ಹಕ್ಕುಗಳು, ವಿಶಿಷ್ಟ ಅಸ್ತಿತ್ವ ಮತ್ತು ಸುಂದರ ಸಂಸ್ಕøತಿಯನ್ನು ಯಾರೊಬ್ಬರೂ
ಕಸಿಯಲಾಗುವುದಿಲ್ಲ ಎಂಬ ಭರವಸೆಯನ್ನು ನೀಡುತ್ತಿದ್ದೇನೆ. ಅಸ್ಸಾಂ ಮತ್ತಷ್ಟು ಪ್ರಗತಿ ಸಾಧಿಸಿ ಪ್ರಜ್ವಲಿಸಬೇಕು.’
ಎಂದು ಪ್ರಧಾನಿ ಹೇಳಿದ್ದಾರೆ. ಪ್ರತಿಪಕ್ಷಗಳ ತೀವ್ರ ಪ್ರತಿಭಟನೆಗಳ ನಡುವೆ ಪೌರತ್ವ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆ ಬುಧವಾರ ಅಂಗೀಕರಿಸಿತ್ತು. ರಾಜ್ಯಸಭೆ ಅಂಗೀಕಾರದೊಂದಿಗೆ ಮಸೂದೆಗೆ ಸಂಸತ್ನ ಅಂಕಿತ
ದೊರೆತಿದೆ.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 