ಭಕ್ತಿಯ ಆಚರಣೆ ಜೀವನದಲ್ಲಿ ಅತ್ಯಗತ್ಯ: ಶ್ರೀಗಳು
The practice of devotion is essential in life: Shri
ಶಿರಹಟ್ಟಿ 20: ಭಕ್ತಿ ಆಚರಣೆಯಿಂದ ಮನುಷ್ಯನ ಆತ್ಮ ಶುದ್ದಿಯಾಗಲಿದ್ದು, ಪ್ರತಿಯೊಬ್ಬರೂ ಜೀವನದಲ್ಲಿ ಸದಾಚಾರ ಸಂಪನ್ನರಾಗಿ ಬಾಳಬೇಕಿದೆ ಎಂದು ಬೆಳ್ಳಟ್ಟಿಯ ರಾಮಲಿಂಗೇಶ್ವರ ಮಠದ ಬಸವರಾಜ ಶ್ರೀಗಳು ಹೇಳಿದರು.
ಶುಕ್ರವಾರ ತಾಲೂಕಿನ ಬೆಳ್ಳಟ್ಟಿ ಗ್ರಾಮದ ಎಪಿಎಂಸಿ ಸಭಾಭವನದಲ್ಲಿ ಶ್ರೀಕ್ಷೇತ್ರಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸತ್ಯನಾರಾಯಣ ಪೂಜಾ ಸಮಿತಿ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾದ ಸತ್ಯನಾರಾಯಣ ಪೂಜಾ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಧಾರ್ಮಿಕ ಕಾರ್ಯಕ್ರಮಗಳಿಂದ ಎಲ್ಲರಿಗೂ ನೆಮ್ಮದಿ ದೊರೆಯುತ್ತದೆ. ಮನುಷ್ಯನ ಜೀವನ ಅತ್ಯಂತ ಪವಿತ್ರ. ಇಂತಹ ಪವಿತ್ರವಾದ ಮನುಷ್ಯ ಜನ್ಮವೆತ್ತಿ ಬಂದ ಮೇಲೆ ಪ್ರತಿಯೊಬ್ಬರೂ ಶ್ರದ್ದೆ ಮತ್ತು ನಿಷ್ಠೆ ಅಳವಡಿಸಿಕೊಂಡು ಬದುಕಬೇಕು. ಸತ್ಯದ ಮಾರ್ಗದಲ್ಲಿ ನಡೆಯಬೇಕಾದರೆ ಭಕ್ತಿ ಬಹಳ ಮುಖ್ಯ. ಅದಕ್ಕಾಗಿ ಭಕ್ತಿಯ ಆಚರಣೆ ಜೀವನದಲ್ಲಿ ಅತ್ಯಗತ್ಯ ಎಂದರು.
ಯುವ ಪೀಳಿಗೆ ಧಾರ್ಮಿಕಾಚರಣೆ ಬಗ್ಗೆ ನಿರ್ಲಕ್ಷಿಸದೇ ಶ್ರದ್ದೆ ಭಕ್ತಿಯಿಂದ ನಾಡಿನ ಆಚಾರ ವಿಚಾರ ಮುಂದಿನ ಪೀಳಿಗೆಗೆ ಕಲಿಸಿಕೊಡುವ ಪ್ರಯತ್ನ ಮಾಡಬೇಕು. ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಮಹಿಳೆಯರ ಆರ್ಥಿಕ ಸಬಲೀಕರಣದಲ್ಲಿ ಧರ್ಮಸ್ಥಳ ಸಂಸ್ಥೆಯದ್ದು ಬಹುದೊಡ್ಡ ಪಾತ್ರವಿದೆ. ಸರ್ಕಾರ ಮಾಡಬೇಕಾದ ಬಹುತೇಕ ಕೆಲಸವನ್ನು ಧರ್ಮಸ್ಥಳದ ಧರ್ಮಧಿಕಾರಿಗಳು ಮಾಡುತ್ತಿದ್ದು, ಧರ್ಮಸ್ಥಳ ಸಂಘ ಕೈಗೊಳ್ಳುವ ಸಮಾಜಮುಖಿ ಕಾರ್ಯಗಳು ನಿಜಕ್ಕೂ ಶ್ಲಾಘನೀಯ ಎಂದರು.
ಗ್ರಾಪಂ ಅಧ್ಯಕ್ಷ ರಮೇಶ ನಿರ್ವಾಣಶೆಟ್ಟರ ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಶಿವಪ್ರಕಾಶ ಮಹಾಜಶೆಟ್ಟರ, ತಿಮ್ಮರಡ್ಡಿ ಮರಡ್ಡಿ, ಮೋಹನ್ ಗುತ್ತೆಮ್ಮನವರು, ಪರಶುರಾಮ ಮಲ್ನಾಡದ, ಗಂಗವ್ವ ತಳವಾರ, ತಾಲೂಕು ಯೋಜನಾಧಿಕಾರಿ ಪುನೀತ್ ಓಲೇಕಾರ್, ಚಂದ್ರಹಾಸ ವಲಯ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ವಿಎಲ್ವಿ ಸೇವಾದಾರರು, ತಾಲೂಕು ನೋಡಲ್ ಅಧಿಕಾರಿಗಳು, ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 