ಸಚಿವರ ಪರಿಸ್ಥಿತಿ ಅಧ್ಯಯನ ಪ್ರವಾಸ ವೇಳೆ ಸಾರ್ವಜನಿಕರು ಅಂತರ ಕಾಯ್ದುಕೊಳ್ಳಬೇಕು : ಎಸ್ ಟಿ ಸೋಮಶೇಖರ್
ಮೈಸೂರು, ಏ 21,ಲಾಕ್ ಡೌನ್ ಜಾರಿಯಲ್ಲಿರುವ ಸಂದರ್ಭದಲ್ಲಿನ ಸ್ಥಿತಿಗತಿ ಅರಿಯಲು ಸಚಿವರುಗಳ ಪ್ರವಾಸ ಸಂದರ್ಭದಲ್ಲಿ ಸಾರ್ವಜನಿಕರು, ರೈತರು ಮತ್ತು ಕಾರ್ಯಕರ್ತರು ಸಾಮಾಜಿಕ ಅಂತರ ಕಾಪಾಡವುಂತೆ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಎಸ್ ಟಿ ಸೋಮಶೇಖರ್ ಮನವಿ ಮಾಡಿದ್ದಾರೆ.ಲಾಕ್ಡೌನ್ ಸಂದರ್ಭದಲ್ಲಿ ಸಾರ್ವಜನಿಕರು, ಕಾರ್ಯಕರ್ತರು, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪುಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಕೊರೋನಾ ವೈರಾಣು ಹರಡುವುದನ್ನು ತಡೆಗಟ್ಟುವ ಸಲುವಾಗಿ ಈಗಾಗಲೇ ಮೈಸೂರು ಜಿಲ್ಲೆಯನ್ನು ಹಾಟ್ ಸ್ಪಾಟ್ ಸ್ಥಳವೆಂದು ಗುರುತಿಸಲ್ಪಟ್ಟಿರುವ ಕಾರಣ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.ಕೊರೊನಾ ವೈರಾಣು ಹರಡುವುದನ್ನು ತಡೆಗಟ್ಟಲು ಸಾರ್ವಜನಿಕರು ಜಾಗರೂಕತೆಯಿಂದಿದ್ದು ಸರ್ಕಾರದ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 