ಮುಂದಿನ ಪೀಳಿಗೆ ಧರ್ಮವಂತರಾಗಿಸೋದೆ ಜೈನ ಧರ್ಮದ ಉದ್ದೇಶ: ಕುಲರತ್ನ
The purpose of Jainism is to make the next generation religious: Kulratna
ಲೋಕದರ್ಶನ ವರದಿ
ಮುಂದಿನ ಪೀಳಿಗೆ ಧರ್ಮವಂತರಾಗಿಸೋದೆ ಜೈನ ಧರ್ಮದ ಉದ್ದೇಶ: ಕುಲರತ್ನ
ರಬಕವಿ-ಬನಹಟ್ಟಿ 04: ಮುಂದಿನ ಪೀಳಿಗೆಗೆ ಧರ್ಮದ ಅರಿವು ಮೂಡಿಸುವ ಕುರಿತು ಜೈನ ಧರ್ಮದಲ್ಲಿ ಅನೇಕ ಧಾರ್ಮಿಕ ಕಾರ್ಯಗಳು ಆಗಾಗ ನಡೆಯುತ್ತಿರುತ್ತವೆ. ಇದರ ಉದ್ದೇಶವೇ ಮುಂದಿನ ಪೀಳಿಗೆಗೂ ಜೈನ ಧರ್ಮದ ಶ್ರೇಷ್ಠತೆ, ಆಚಾರ ವಿಚಾರ ಗೊತ್ತಾಗಲಿ ಎನುವುದೇ ಮೂಲ ಉದ್ದೇಶವಾಗಿದೆ. ಧರ್ಮ ಮರೆತರೆ ಬದುಕಿಲ್ಲ, ಸುಂದರ ಮತ್ತು ಮಹೋನ್ನತ ಬದುಕಿಗೆ ಧರ್ಮವೇ ಮೂಲ ಸೆಲೆಯಾಗಿದೆ. ನಾವು ಧರ್ಮ ಪಾಲಿಸಿದರೆ ನಮ್ಮನ್ನು ಧರ್ಮವೇ ಸಂರಕ್ಷಿಸುತ್ತದೆ ಎಂದು ಹಳಿಂಗಳಿ ಭದ್ರಗಿರಿ ಬೆಟ್ಟದ ಜೈನ ಮುನಿ ಆಚಾರ್ಯ 108 ಕುಲರತ್ನಭೂಷಣ ಮಹಾರಾಜರು ಹೇಳಿದರು.
ತಾಲೂಕಿನ ಭದ್ರಿಗಿರಿ ಬೆಟ್ಟದಲ್ಲಿ ಹಮ್ಮಿಕೊಂಡ ಜಿನ ಸಹಸ್ರಷ್ಟ ನಾಮ ಅರ್ಚನೆ ಆರಾಧನಾ ಮಹೋತ್ಸದಲ್ಲಿ ಪ್ರವಚನ ನೀಡಿ ಅವರು ಮಾತನಾಡಿದರು. ಹಳಿಂಗಳಿ ಭದ್ರಗಿರಿ ಬೆಟ್ಟ ಜೈನರ ಕಾಶಿಯಾಗಿದ್ದು, ಇಲ್ಲಿ ಸಾವಿರಾರು ವರ್ಷಗಳ ಹಿಂದೆ 772 ಮುನಿಗಳು ಚಾತುರ್ಮಾಸ ಗೈದಪುಣ್ಯ ಭೂಮಿಯಾಗಿದೆ. ಈ ಸ್ಥಳದಲ್ಲಿ ಇಂಥಹ ಪುಣ್ಯ ಕಾರ್ಯಗಳನ್ನು ಮಾಡುವುದು ಮತ್ತು ಭಾಗಿಯಾಗುವುದರಿಂದ ಅಗಣಿತ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದರು.
ಈ ಸಂದರ್ಭದಲ್ಲಿ 20 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಶ್ರಾವಕ-ಶ್ರಾವಕಿಯರು ಪೂಜೆಯಲ್ಲಿ ಭಾಗವಹಿಸಿದ್ದರು. ರಾಜ್ಯ ಸೇರಿದಂತೆ ಮಹಾರಾಷ್ಟ್ರ, ಗೋವಾ ರಾಜ್ಯಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಶ್ರಾವಕ-ಶ್ರಾವಕಿಯರು ಆಗಮಿಸಿ ಕೃತಾರ್ಥರಾದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 