ಸದೃಢ ಭಾರತವನ್ನು ನಿರ್ಮಿಸುವುದೇ ಕ್ರೀಡಾಕೂಟಗಳ ಉದ್ದೇಶ : ನಾರಗೊಂಡ
The purpose of sports events is to build a strong India: Nargonda
ಹಾರೂಗೇರಿ, 25 : ಭಾರತೀಯ ಗ್ರಾಮೀಣರ ಅಚ್ಚುಮೆಚ್ಚಿನ ಕ್ರೀಡೆಯಾದ ಕಬಡ್ಡಿ, ಮನಸ್ಸುಗಳ ಸೌಹಾರ್ದತೆಯ ಬೆಸುಗೆ ಹಾಕುವ ಸಾಧನವಾಗಿದೆ. ಸದೃಢ ಭಾರತವನ್ನು ನಿರ್ಮಿಸುವುದೇ ಕ್ರೀಡಾಕೂಟಗಳ ಮುಖ್ಯ ಉದ್ದೇಶವಾಗಿದೆ ಎಂದು ಎಸ್ಎಂಎನ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ವಿವೇಕ ನಾರಗೊಂಡ ಹೇಳಿದರು.
ಪಟ್ಟಣ ಸಮೀಪದ ಹಾರೂಗೇರಿ ಕ್ರಾಸ್ದ ಎಸ್.ಎಂ.ನಾರಗೊಂಡ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಗುರುವಾರ ಹಮ್ಮಿಕೊಳ್ಳಲಾದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಕಬಡ್ಡಿ ಕ್ರೀಡಾಕೂಟಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಂದು ಪಠ್ಯೇತರ ಚಟುವಟಿಕೆಗಳು ಅವಜ್ಞೆಗೆ ಒಳಗಾಗುತ್ತಿದ್ದು, ಇದರಿಂದ ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ವಿಕಾಸ ಸಾಧ್ಯವಾಗುತ್ತಿಲ್ಲ. ಪಠ್ಯದಷ್ಟೇ ಪಠ್ಯಪೂರಕ ಮತ್ತು ಪಠ್ಯೇತರ ಚಟುವಟಿಕೆಗಳು ಮಹತ್ವದ್ದಾಗಿವೆ. ರಾಜ್ಯಮಟ್ಟದ ಕ್ರೀಡಾಕೂಟಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ಹಮ್ಮಿಕೊಳ್ಳುವುದರಿಂದ ಜನರಲ್ಲಿ ಕ್ರೀಡಾಸಕ್ತಿ, ಕ್ರೀಡಾಪ್ರೇಮ ಹೆಚ್ಚಲಿದೆ ಎಂದು ಹೇಳಿದರು.
ಜಿಲ್ಲಾ ಕ್ರೀಡಾ ಸಂಯೋಜಕ ಅಜಯ ಮೋನೆ ಮಾತನಾಡುತ್ತ ಕ್ರೀಡೆಗಳು ದೇಶದ ಐಕ್ಯತೆಯನ್ನು ವೃದ್ಧಿಸುತ್ತಿದ್ದು, ಕಾಲೇಜುಗಳು ಕ್ರೀಡೆಗಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಸ್ಪರ್ಧಾಳುಗಳು ಕ್ರೀಡಾಮನೋಭಾವ ಮತ್ತು ಕ್ರೀಡಾ ನಿಯಮಗಳನ್ನು ಪಾಲಿಸಬೇಕೆಂದು ಹೇಳಿದರು.
ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಸಸಿಗೆ ನೀರೆರೆದು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ 8 ತಾಲೂಕುಗಳ ಮಹಿಳಾ ಮ್ತತು ಪುರುಷ ಕಬಡ್ಡಿ ಕ್ರೀಡಾಪಟುಗಳು ಭಾಗವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಡಾ.ಗೀರೀಶ ನಾರಗೊಂಡ, ರಾಯಬಾಗ ತಾಲೂಕು ಕ್ರೀಡಾ ಸಂಯೋಜಕ ಕುಶಲ ಶೆಟ್ಟಿ, ಜಿಲ್ಲಾಮಟ್ಟದ ಕಬಡ್ಡಿ ಕ್ರೀಡಾಕೂಟದ ಪರೀವೀಕ್ಷಕ ಬಾಳೇಶ ನಾಯಿಕ, ಪ್ರಾಚಾರ್ಯ ಪ್ರಶಾಂತ ಎಲ್.ಎಚ್. ದೈಹಿಕ ಉಪನ್ಯಾಸಕ ಸಿದ್ದು ಕಿರೆಸೂರ, ವರ್ಧಮಾನ ಶಿರಹಟ್ಟಿ, ಪ್ರದೀಪ ಹಾಲ್ಗುಣಿ, ಆನಂದ ಪಾಟೀಲ, ಬಾಬು ನಡೋಣಿ ವೇದಿಕೆಯಲ್ಲಿದ್ದರು.
ಕಿರಣ ಯಲ್ಲಟ್ಟಿ ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಮಹಾಂತೇಶ ಮುಗಳಖೋಡ ಕಾರ್ಯಕ್ರಮ ನಿರೂಪಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 