ಸಮಾಜ ಕಲ್ಯಾಣ ಇಲಾಖೆ ಕಚೇರಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಾರ್ವಜನಿಕರ ಪರದಾಟ
The road to the Social Welfare Department office has completely deteriorated, causing public outcry.
ಸವದತ್ತಿ 24 : ಪಟ್ಟಣದ ಭಗೀರಥ ಸರ್ಕಲ್ ಸಮೀಪವಿರುವ ಸಮಾಜ ಕಲ್ಯಾಣ ಇಲಾಖೆ ಕಾರ್ಯಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕಚೇರಿಗೆ ತಲುಪಲು ಹರಸಾಹಸ ಪಡುವಂತಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಈ ಕಚೇರಿಗೆ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳು, ವೃದ್ಧರು ಹಾಗೂ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ ಭೇಟಿ ನೀಡುತ್ತಾರೆ. ಆದರೆ, ಕಚೇರಿಗೆ ಹೋಗುವ ರಸ್ತೆಯುದ್ದಕ್ಕೂ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು, ಮಳೆ ಬಂದರಂತೂ ರಸ್ತೆ ಕೆಸರು ಗದ್ದೆಯಂತಾಗುತ್ತಿದೆ. ಇದರಿಂದಾಗಿ ದ್ವಿಚಕ್ರ ವಾಹನ ಸವಾರರು ಅನಾಹುತಕ್ಕೆ ಈಡಾಗುವ ಸಂಭವ ಹೆಚ್ಚಿದೆ. ಸರ್ಕಾರಿ ಕಚೇರಿ ಇರುವ ಜಾಗದ ರಸ್ತೆಯೇ ಈ ಸ್ಥಿತಿಯಲ್ಲಿದ್ದರೆ ಸಾರ್ವಜನಿಕರ ಪಾಡೇನು ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಕಚೇರಿಯ ಸ್ವಂತ ವಾಹನಗಳು ಓಡಾಡಲು ಕಷ್ಟಪಡುತ್ತಿದ್ದು, ಸಾರ್ವಜನಿಕರು ತಮ್ಮ ಬೈಕ್ ಮತ್ತು ಇತರ ವಾಹನಗಳಲ್ಲಿ ಈ ರಸ್ತೆಯಲ್ಲಿ ಬರಲು ಭಯಪಡುವಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ, ಕಚೇರಿಯವರೆಗೆ ಸುಸಜ್ಜಿತ ರಸ್ತೆ ನಿರ್ಮಿಸಿ ಕೊಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆರ್.ಆರ್.ಕುಲಕರ್ಣಿ, ಮಾತನಾಡಿ ರಸ್ತೆಯ ದುಸ್ಥಿತಿಯ ಬಗ್ಗೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಶೀಘ್ರವಾಗಿ ದುರಸ್ತಿಪಡಿಸುವಂತೆ ತಿಳಿಸಲಾಗಿದೆ ಎಂದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 