ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಮಠಗಳ ಪಾತ್ರ ಮಹತ್ವದ್ದಾಗಿದೆ: ಶಾಸಕ ಐಹೊಳೆ
The role of monasteries is important in preserving the country's culture: MLA Aihole
ರಾಯಬಾಗ 09: ನಮ್ಮ ದೇಶದ ಸಂಸ್ಕೃತಿಯನ್ನು ಉಳಿಸುವಲ್ಲಿ ಮಠಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ತಾಲೂಕಿನ ನಂದಿಕುರಳಿ ಗ್ರಾಮದ ಪಂಚಲಿಂಗೇಶ್ವರ ಮಠದಲ್ಲಿ ಮಂಗಳವಾರ ರಾತ್ರಿ ಆಯೋಜಿಸಿರುವ 38ನೇ ಶರಣ ಸಂಸ್ಕೃತಿ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಸಾನ್ನಿಧ್ಯ ವಹಿಸಿದ್ದ ನಿಡಸೋಸಿ ದುರದುಂಡೇಶ್ವರ ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮಾತನಾಡಿ, ಮನುಷ್ಯನಿಗೆ ಮಾನಸಿಕ ನೆಮ್ಮದಿ ನೀಡುವ ಕೆಲಸವನ್ನು ಮಠಗಳು ಮಾಡುತ್ತ ಬಂದಿವೆ. ಧರ್ಮದ ಉಪದೇಶಗಳು ಮನೆ ಮನೆಗಳಿಗೆ ಮುಟ್ಟಿಸುವ ಕಾರ್ಯವನ್ನು 12ನೇ ಶತಮಾನದ ಶರಣರು ಮಾಡಿದ್ದಾರೆ. ಎಲ್ಲರಿಗೂ ಶಿಕ್ಷಣ ಮತ್ತು ಜ್ಞಾನ ನೀಡುವುದರ ಮೂಲಕ, ಸರ್ಕಾರ ಮಾಡದ ಕೆಲಸವನ್ನು ಈ ಹಿಂದೆಯೇ ಮಠಗಳು ಮಾಡಿ ತೋರಿಸಿವೆ ಎಂದು ಹೇಳಿದರು.
ಬಾವನ ಸೌಂದತ್ತಿ ಓಂಕಾರ ಆಶ್ರಮದ ಶಿವಶಂಕರ ಸ್ವಾಮೀಜಿ, ನಂದಿಕುರಳಿ ಪಂಚಲಿಂಗೇಶ್ವರ ಮಠದ ವೀರಭದ್ರ ಸ್ವಾಮೀಜಿ, ಭೃಮರಾಂಬಿಕಾ ಶಿವಯೋಗಿ, ಅಮೀತ ಜಾಧವ, ಪೃಥ್ವಿರಾಜ ಜಾಧವ, ಸದಾನಂದ ಹಳಿಂಗಳಿ, ಬಸವರಾಜ ಡೋಣವಾಡೆ, ಶಿವಪ್ಪ ನಾಯಿಕ, ಅಪ್ಪಾಸಾಬ ಬ್ಯಾಕೂಡ ಸೇರಿ ಅನೇಕ ಭಕ್ತಾದಿಗಳು ಇದ್ದರು.ನಂತರ ಮಹನ್ಯಾ ಪಾಟೀಲ ತಂಡದಿಂದ ಸಂಗೀತ ಕಾರ್ಯಕ್ರಮ ಜರುಗಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 