ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಹಿರಿದು
The role of teachers in educational development is immense
ರಬಕವಿ-ಬನಹಟ್ಟಿ 12: ವಿದ್ಯಾರ್ಥಿಗಳ ಮನದಾಳಕ್ಕೆ ಹೋಗಿ ಅವರಇಷ್ಟಾನುಸಾರ ಬೋಧನೆ ಮಾಡುವಲ್ಲಿ ಮತ್ತು ಶೈಕ್ಷಣಿಕಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆಎಂದು ಬಾಗಲಕೋಟೆ ಜಿಲ್ಲಾಡಿಡಿಪಿಐಅಜಿತ ಮನ್ನಿಕೇರಿ ಹೇಳಿದರು.
ರಬಕವಿ ಹೊಸೂರಿನ ಹಜಾರೆ ಫೌಂಡೇಶನ್, ಪದ್ಮಾವತಿ ವಿಜ್ಞಾನ ಮತ್ತು ವಾಣಿಜ್ಯ ಪಪೂ ಮಹಾವಿದ್ಯಾಲಯದಲ್ಲಿಜಿಪಂ, ಶಾಲಾ ಶಿಕ್ಷಣ ಇಲಾಖೆ ಬಾಗಲಕೋಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಗಳು ಜಮಖಂಡಿಇವರ ಸಹಯೋಗದಲ್ಲಿಜಿಲ್ಲೆಯ ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಫಲಿತಾಂಶ ವೃದ್ಧಿಗಾಗಿ ಬುಧವಾರ ಹಮ್ಮಿಕೊಂಡಿದ್ದಒಂದು ದಿನದಕಾರ್ಯಾಗಾರಕ್ಕೆ ಚಾಲನೆ ನೀಡಿಅವರು ಮಾತನಾಡಿ, ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ವೃದ್ಧಿಸಲು ಶಿಕ್ಷಕರು ಉತ್ತಮವಾದತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಂಪನ್ಮೂಲ ವ್ಯಕ್ತಿ ಪಠ್ಯ ಪುಸ್ತಕ ರಚನಾ ಸಮಿತಿ ಮಾಜಿಸದಸ್ಯಡಾ.ಗಣೇಶ್ ಭಟ್ ಮಾತನಾಡಿ, ಶಿಕ್ಷಕರಾದವರು ಚಟುವಟಿಕೆಗಳ ಮೂಲಕ ಪಾಠ ಬೋಧಿಸುವ ಕಲೆಗಳನ್ನು ವಿದ್ಯಾರ್ಥಿಗಳು ತಮ್ಮ ಬೋಧನೆಯ ಕಡೆಗೆಗಮನ ಕೊಡುವ ಕೌಶಲ್ಯಕರಗತ ಮಾಡಿಕೊಳ್ಳಬೇಕೆಂದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಪಠ್ಯ ಪುಸ್ತಕ ರಚನಾ ಸಮಿತಿ ಸದಸ್ಯ ಶಶಿಕುಮಾರ ಬಿ.ಎಸ್. ಜಮಖಂಡಿ ಬಿಪೊ ಅಶೋಕ ಬಸನ್ನವರ ಮಾತನಾಡಿದರು.
ಸಂಸ್ಥೆಯಕಾರ್ಯಾಧ್ಯಕ್ಷ ಸತೀಶ ಹಜಾರೆ, ಆಡಳಿತಾಧಿಕಾರಿ ಭಾರತಿ ತಾಳಿಕೋಟಿ, ಪ್ರಾಚಾರ್ಯ ಶ್ರೀಶೈಲ ಕುಂಬಾರ, ಎಲ್ಲಉಪನ್ಯಾಸಕರು, ಪ್ರಾಚಾರ್ಯ ಸತೀಶ ಬೆಳಗಲಿ ಸೇರಿದಂತೆಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 